ಮಂಡ್ಯ

ಅವಾಚ್ಯ ಪದ ಬಳಸಿದ್ದು ಸುಳ್ಳಾಗಿದ್ದರೆ ಅರೆಸ್ಟ್ ಆಗ್ತಿತ್ತಾ ? ಸಿ.ಟಿ ರವಿ ಬಂಧನಕ್ಕೆ ಸಿಎಂ ಪ್ರತಿಕ್ರಿಯೆ

 

ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಅವರು ಇಂದು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿ ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಪದಬಳಕೆಯಾಗಿರುವುದು ಸತ್ಯ

ಸಭಾಪತಿ ಬಸವರಾಜ ಹೊರಟ್ಟಿಯವರು , ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ ಎಂದರು.

ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ

ಸಿಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.

ಮಂಡ್ಯ ಅಪ್ಪಟ ಕನ್ನಡದ ನೆಲ

ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೆಳನದ ಉದ್್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಅಪ್ಪಟ ಕನ್ನಡ ನೆಲ ಮಂಡ್ಯ. ಮಂಡ್ಯಕ್ಕೆ ಬರುವ ಪರಭಾಷಿಕರು ಸಹ ಕನ್ನಡವನ್ನು ಕಲಿಯುತ್ತಾರೆ. ಕನ್ನಡ ನಾಡಿನ ಭಾಷೆ ,ರಾಜ್ಯಭಾಷೆ ಆಗಿದೆ ಎಂದರು.

andolana

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

9 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

12 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

12 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

13 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

13 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

13 hours ago