ಮಂಡ್ಯ

ಅವಾಚ್ಯ ಪದ ಬಳಸಿದ್ದು ಸುಳ್ಳಾಗಿದ್ದರೆ ಅರೆಸ್ಟ್ ಆಗ್ತಿತ್ತಾ ? ಸಿ.ಟಿ ರವಿ ಬಂಧನಕ್ಕೆ ಸಿಎಂ ಪ್ರತಿಕ್ರಿಯೆ

 

ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಅವರು ಇಂದು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿ ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಪದಬಳಕೆಯಾಗಿರುವುದು ಸತ್ಯ

ಸಭಾಪತಿ ಬಸವರಾಜ ಹೊರಟ್ಟಿಯವರು , ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ ಎಂದರು.

ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ

ಸಿಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.

ಮಂಡ್ಯ ಅಪ್ಪಟ ಕನ್ನಡದ ನೆಲ

ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೆಳನದ ಉದ್್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಅಪ್ಪಟ ಕನ್ನಡ ನೆಲ ಮಂಡ್ಯ. ಮಂಡ್ಯಕ್ಕೆ ಬರುವ ಪರಭಾಷಿಕರು ಸಹ ಕನ್ನಡವನ್ನು ಕಲಿಯುತ್ತಾರೆ. ಕನ್ನಡ ನಾಡಿನ ಭಾಷೆ ,ರಾಜ್ಯಭಾಷೆ ಆಗಿದೆ ಎಂದರು.

andolana

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago