ಮಂಡ್ಯ (ಕೆ.ಆರ್.ಎಸ್) : ಬಿಜೆಪಿ ಆಪರೇಷ್ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್ ಕುರಿತು ವ್ಯಂಗ್ಯವಾಡಿದರು.
ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿ ಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದರು.
ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ ? ಅದಕ್ಕೇ ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.
ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.
ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ವೇದಿಕೆಯಿಂದಲೇ ಆದೇಶ ನೀಡಿದರು.





