Siddaramaiah says BJP and JDS should form a coalition government
ಮಂಡ್ಯ (ಕೆ.ಆರ್.ಎಸ್) : ಬಿಜೆಪಿ ಆಪರೇಷ್ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್ ಕುರಿತು ವ್ಯಂಗ್ಯವಾಡಿದರು.
ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿ ಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದರು.
ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ ? ಅದಕ್ಕೇ ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.
ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.
ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ವೇದಿಕೆಯಿಂದಲೇ ಆದೇಶ ನೀಡಿದರು.
ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 9ನೇ ಬಜೆಟ್ ಮಂಡನೆ…
ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ…
ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ...…
ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ…
ತಾಯಿಯೇ ಮೊದಲ ಶಿಕ್ಷಕಿ; ಮನೆಯೇ ಮೊದಲ ಪಾಠ ಶಾಲೆ’ ಎನ್ನುವ ನಾಣ್ಣುಡಿಯನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ದಲಿತರಲ್ಲದ ಬಲಿಷ್ಠ ಜಾತಿಗಳ ಅಷ್ಟೇ…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…