ಮಂಡ್ಯ

ಕಮಲ-ದಳ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು,ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ : ಸಿ.ಎಂ ವ್ಯಂಗ್ಯ

ಮಂಡ್ಯ (ಕೆ.ಆರ್‌.ಎಸ್)‌ : ಬಿಜೆಪಿ ಆಪರೇಷ್‌ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್‌ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್‌ ಕುರಿತು ವ್ಯಂಗ್ಯವಾಡಿದರು.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿ ಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದರು.

ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ ? ಅದಕ್ಕೇ ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.

ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ವೇದಿಕೆಯಿಂದಲೇ ಆದೇಶ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

11 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

11 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

14 hours ago