ಮಂಡ್ಯ

ಜುಲೈ. 28ರಂದು ಸಿದ್ದರಾಮಯ್ಯರಿಂದ ವಿವಿಧ ಕಾಮಗಾರಿ ಉದ್ಘಾಟನೆ: ಅಗತ್ಯ ಸಿದ್ಧತೆಗೆ ಶಾಸಕ ಕೆ.ಎಂ.ಉದಯ್‌ ಸೂಚನೆ

ಮದ್ದೂರು: ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ. 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರು ಸೂಚನೆ ನೀಡಿದರು.

ಶಾಸಕ ಉದಯ್‌ ಅವರಿಂದು ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ಅಚ್ಚುಕಟ್ಟಾಗಿ ಯಾವುದೇ ಲೋಪವಿಲ್ಲದೇ ಆಯೋಜಿಸಲು ಶಿಷ್ಟಾಚಾರ, ಆಹಾರ, ವಸ್ತುಪ್ರದರ್ಶನ, ಕುಡಿಯುವ ನೀರು ಹಾಗೂ ಸ್ವಚ್ಛತೆ, ಭದ್ರತೆ, ವೇದಿಕೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದರು.

ಅಂದಾಜು‌ 1400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನಡೆಯಲಿದ್ದು, ಸಾರ್ವಜನಿಕರಿಗೆ ಉಪಯುಕ್ತವಾಗುವ 1400 ಕೋಟಿ ರೂ ವೆಚ್ಚದಲ್ಲಿ ಹಲವಾರು ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.

ಲೋಕೋಯೋಗಿ ಇಲಾಖೆಯ 81 ಕೋಟಿ ರೂ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ 12 ಕೋಟಿ ರೂ, ಕಾವೇರಿ ನೀರಾವರಿ ನಿಗಮ 300 ಕೋಟಿ ರೂ ಸೇರಿದಂತೆ ವಿವಿಧ ಇಲಾಖೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ನಡೆಯಲಿದೆ ಎಂದರು‌.

ಆಂದೋಲನ ಡೆಸ್ಕ್

Recent Posts

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

10 mins ago

ಮರ್ಯಾದೆಗೇಡೆ ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

36 mins ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

1 hour ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

1 hour ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

2 hours ago

ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…

2 hours ago