Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿಯೇ ಪಕ್ಷ ಸಿದ್ದರಾಮಯ್ಯರನ್ನ ಸಿಎಂ ಮಾಡಿದೆ : ಶಾಸಕ ನರೇಂದ್ರಸ್ವಾಮಿ

ಮಂಡ್ಯ : ಸಿದ್ದರಾಮಯ್ಯ ಅವರನ್ನ ನೇರವಾಗಿ ಕಾಂಗ್ರೆಸ್‌ ಪಕ್ಷ ಸಿಎಂ ಮಾಡಿಲ್ಲ. ಪ್ರತಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ಅವರನ್ನು ಸಿಎಂ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ.

ಮಳವಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಲೂ ನಮ್ಮ ಪಕ್ಷ ಶಾಸಕರ ಬಹುಮತದ ಅಭಿಪ್ರಾಯಕ್ಕೆ ಬದ್ಧವಾಗಿದೆ. ೨೦೧೩ ರಲ್ಲೂ ವೋಟಿಂಗ್‌ ಮಾಡಿ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲಾಯ್ತು. ಇದು ನಮ್ಮ ಪಕ್ಷದ ಇಂಟರ್ನಲ್‌ ಡೆಮಾಕ್ರಸಿ. ಈಗಲೂ ನಮ್ಮ ಕಾಂಗ್ರೆಸ್‌ ಪಕ್ಷ ಈ ಡೆಮಾಕ್ರಸಿಗೆ ಬದ್ಧವಾಗಿದೆ ಎಂದರು.

ಅಲ್ಲದೆ ಪಕ್ಷದ ಭವಿಷ್ಯದ ದೃಷ್ಠಿಯಿಂದ ಸಮಯ ಸಂದರ್ಭ ನೋಡಿ ಬೇರೆಯವರಿಗೆ ಅವಕಾಶವನ್ನು ಮಾಡಿಕೊಡಲಾಗುತ್ತದೆ. ಯಾರನ್ನೋ ಓಲೈಕೆಗೆ ಹಾಗೂ ಹೊಗಳಿಕೆಗೆ ಸಿಎಂ ಬದಲಾವಣೆ ವಿಚಾರವನ್ನು ಮಾತನಾಡಬಾರದು. ಮೊದಲನೇ ಬಾರಿ ಆಯ್ಕೆಯಾದ ಶಾಸಕರು ಬಹಳ ಹಾರಾಡುತ್ತಿದ್ದಾರೆ. ಈ ರೀತಿ ಬಹಿರಂಗವಾಗಿ ಮಾತನಾಡದೇ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಮಂಡ್ಯದಲ್ಲಿ ಅತೀಹೆಚ್ಚು ಕಾಲ ಕಾಂಗ್ರೆಸ್‌ ಕಟ್ಟಿದವನು ನಾನು. ನಾನೇ ನನಗೆ ಅನ್ಯಾಯ ಆಯ್ತು ಅಂತ ಬೀದಿಯಲ್ಲಿ ಮಾತನಾಡೋಕೆ ಆಗುತ್ತಾ..? ಪಕ್ಷದ ತೀರ್ಮಾನಗಳನ್ನ ತಲೆಬಾಗಿ ಒಪ್ಪುತ್ತೇನೆ ಅದರಂತೆ ಎಲ್ಲರು ಮಾಡಬೇಕು ಎಂದು ಹೇಳಿದರು .

Tags: