ಮಂಡ್ಯ : ಸಿದ್ದರಾಮಯ್ಯ ಅವರನ್ನ ನೇರವಾಗಿ ಕಾಂಗ್ರೆಸ್ ಪಕ್ಷ ಸಿಎಂ ಮಾಡಿಲ್ಲ. ಪ್ರತಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ಅವರನ್ನು ಸಿಎಂ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ.
ಮಳವಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಲೂ ನಮ್ಮ ಪಕ್ಷ ಶಾಸಕರ ಬಹುಮತದ ಅಭಿಪ್ರಾಯಕ್ಕೆ ಬದ್ಧವಾಗಿದೆ. ೨೦೧೩ ರಲ್ಲೂ ವೋಟಿಂಗ್ ಮಾಡಿ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲಾಯ್ತು. ಇದು ನಮ್ಮ ಪಕ್ಷದ ಇಂಟರ್ನಲ್ ಡೆಮಾಕ್ರಸಿ. ಈಗಲೂ ನಮ್ಮ ಕಾಂಗ್ರೆಸ್ ಪಕ್ಷ ಈ ಡೆಮಾಕ್ರಸಿಗೆ ಬದ್ಧವಾಗಿದೆ ಎಂದರು.
ಅಲ್ಲದೆ ಪಕ್ಷದ ಭವಿಷ್ಯದ ದೃಷ್ಠಿಯಿಂದ ಸಮಯ ಸಂದರ್ಭ ನೋಡಿ ಬೇರೆಯವರಿಗೆ ಅವಕಾಶವನ್ನು ಮಾಡಿಕೊಡಲಾಗುತ್ತದೆ. ಯಾರನ್ನೋ ಓಲೈಕೆಗೆ ಹಾಗೂ ಹೊಗಳಿಕೆಗೆ ಸಿಎಂ ಬದಲಾವಣೆ ವಿಚಾರವನ್ನು ಮಾತನಾಡಬಾರದು. ಮೊದಲನೇ ಬಾರಿ ಆಯ್ಕೆಯಾದ ಶಾಸಕರು ಬಹಳ ಹಾರಾಡುತ್ತಿದ್ದಾರೆ. ಈ ರೀತಿ ಬಹಿರಂಗವಾಗಿ ಮಾತನಾಡದೇ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಮಂಡ್ಯದಲ್ಲಿ ಅತೀಹೆಚ್ಚು ಕಾಲ ಕಾಂಗ್ರೆಸ್ ಕಟ್ಟಿದವನು ನಾನು. ನಾನೇ ನನಗೆ ಅನ್ಯಾಯ ಆಯ್ತು ಅಂತ ಬೀದಿಯಲ್ಲಿ ಮಾತನಾಡೋಕೆ ಆಗುತ್ತಾ..? ಪಕ್ಷದ ತೀರ್ಮಾನಗಳನ್ನ ತಲೆಬಾಗಿ ಒಪ್ಪುತ್ತೇನೆ ಅದರಂತೆ ಎಲ್ಲರು ಮಾಡಬೇಕು ಎಂದು ಹೇಳಿದರು .
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…