ಮಂಡ್ಯ

ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿಯೇ ಪಕ್ಷ ಸಿದ್ದರಾಮಯ್ಯರನ್ನ ಸಿಎಂ ಮಾಡಿದೆ : ಶಾಸಕ ನರೇಂದ್ರಸ್ವಾಮಿ

ಮಂಡ್ಯ : ಸಿದ್ದರಾಮಯ್ಯ ಅವರನ್ನ ನೇರವಾಗಿ ಕಾಂಗ್ರೆಸ್‌ ಪಕ್ಷ ಸಿಎಂ ಮಾಡಿಲ್ಲ. ಪ್ರತಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ಅವರನ್ನು ಸಿಎಂ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ.

ಮಳವಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಲೂ ನಮ್ಮ ಪಕ್ಷ ಶಾಸಕರ ಬಹುಮತದ ಅಭಿಪ್ರಾಯಕ್ಕೆ ಬದ್ಧವಾಗಿದೆ. ೨೦೧೩ ರಲ್ಲೂ ವೋಟಿಂಗ್‌ ಮಾಡಿ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲಾಯ್ತು. ಇದು ನಮ್ಮ ಪಕ್ಷದ ಇಂಟರ್ನಲ್‌ ಡೆಮಾಕ್ರಸಿ. ಈಗಲೂ ನಮ್ಮ ಕಾಂಗ್ರೆಸ್‌ ಪಕ್ಷ ಈ ಡೆಮಾಕ್ರಸಿಗೆ ಬದ್ಧವಾಗಿದೆ ಎಂದರು.

ಅಲ್ಲದೆ ಪಕ್ಷದ ಭವಿಷ್ಯದ ದೃಷ್ಠಿಯಿಂದ ಸಮಯ ಸಂದರ್ಭ ನೋಡಿ ಬೇರೆಯವರಿಗೆ ಅವಕಾಶವನ್ನು ಮಾಡಿಕೊಡಲಾಗುತ್ತದೆ. ಯಾರನ್ನೋ ಓಲೈಕೆಗೆ ಹಾಗೂ ಹೊಗಳಿಕೆಗೆ ಸಿಎಂ ಬದಲಾವಣೆ ವಿಚಾರವನ್ನು ಮಾತನಾಡಬಾರದು. ಮೊದಲನೇ ಬಾರಿ ಆಯ್ಕೆಯಾದ ಶಾಸಕರು ಬಹಳ ಹಾರಾಡುತ್ತಿದ್ದಾರೆ. ಈ ರೀತಿ ಬಹಿರಂಗವಾಗಿ ಮಾತನಾಡದೇ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಮಂಡ್ಯದಲ್ಲಿ ಅತೀಹೆಚ್ಚು ಕಾಲ ಕಾಂಗ್ರೆಸ್‌ ಕಟ್ಟಿದವನು ನಾನು. ನಾನೇ ನನಗೆ ಅನ್ಯಾಯ ಆಯ್ತು ಅಂತ ಬೀದಿಯಲ್ಲಿ ಮಾತನಾಡೋಕೆ ಆಗುತ್ತಾ..? ಪಕ್ಷದ ತೀರ್ಮಾನಗಳನ್ನ ತಲೆಬಾಗಿ ಒಪ್ಪುತ್ತೇನೆ ಅದರಂತೆ ಎಲ್ಲರು ಮಾಡಬೇಕು ಎಂದು ಹೇಳಿದರು .

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

10 mins ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

20 mins ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

26 mins ago

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

53 mins ago

ಅದ್ಧೂರಿಯಾಗಿ ಬೂದನೂರು ಉತ್ಸವ ಆಚರಣೆ : ಪಿ.ರವಿಕುಮಾರ್

ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…

1 hour ago

ಬಾಲ ನಟ, ನಟಿ : ಜಿಲ್ಲಾಧಿಕಾರಿಯಿಂದ ಅನುಮತಿ ಕಡ್ಡಾಯ

ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…

1 hour ago