ಮಂಡ್ಯ : ಸಿದ್ದರಾಮಯ್ಯ ಅವರನ್ನ ನೇರವಾಗಿ ಕಾಂಗ್ರೆಸ್ ಪಕ್ಷ ಸಿಎಂ ಮಾಡಿಲ್ಲ. ಪ್ರತಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ಅವರನ್ನು ಸಿಎಂ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ.
ಮಳವಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಲೂ ನಮ್ಮ ಪಕ್ಷ ಶಾಸಕರ ಬಹುಮತದ ಅಭಿಪ್ರಾಯಕ್ಕೆ ಬದ್ಧವಾಗಿದೆ. ೨೦೧೩ ರಲ್ಲೂ ವೋಟಿಂಗ್ ಮಾಡಿ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲಾಯ್ತು. ಇದು ನಮ್ಮ ಪಕ್ಷದ ಇಂಟರ್ನಲ್ ಡೆಮಾಕ್ರಸಿ. ಈಗಲೂ ನಮ್ಮ ಕಾಂಗ್ರೆಸ್ ಪಕ್ಷ ಈ ಡೆಮಾಕ್ರಸಿಗೆ ಬದ್ಧವಾಗಿದೆ ಎಂದರು.
ಅಲ್ಲದೆ ಪಕ್ಷದ ಭವಿಷ್ಯದ ದೃಷ್ಠಿಯಿಂದ ಸಮಯ ಸಂದರ್ಭ ನೋಡಿ ಬೇರೆಯವರಿಗೆ ಅವಕಾಶವನ್ನು ಮಾಡಿಕೊಡಲಾಗುತ್ತದೆ. ಯಾರನ್ನೋ ಓಲೈಕೆಗೆ ಹಾಗೂ ಹೊಗಳಿಕೆಗೆ ಸಿಎಂ ಬದಲಾವಣೆ ವಿಚಾರವನ್ನು ಮಾತನಾಡಬಾರದು. ಮೊದಲನೇ ಬಾರಿ ಆಯ್ಕೆಯಾದ ಶಾಸಕರು ಬಹಳ ಹಾರಾಡುತ್ತಿದ್ದಾರೆ. ಈ ರೀತಿ ಬಹಿರಂಗವಾಗಿ ಮಾತನಾಡದೇ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಮಂಡ್ಯದಲ್ಲಿ ಅತೀಹೆಚ್ಚು ಕಾಲ ಕಾಂಗ್ರೆಸ್ ಕಟ್ಟಿದವನು ನಾನು. ನಾನೇ ನನಗೆ ಅನ್ಯಾಯ ಆಯ್ತು ಅಂತ ಬೀದಿಯಲ್ಲಿ ಮಾತನಾಡೋಕೆ ಆಗುತ್ತಾ..? ಪಕ್ಷದ ತೀರ್ಮಾನಗಳನ್ನ ತಲೆಬಾಗಿ ಒಪ್ಪುತ್ತೇನೆ ಅದರಂತೆ ಎಲ್ಲರು ಮಾಡಬೇಕು ಎಂದು ಹೇಳಿದರು .
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…