ಮಂಡ್ಯ : ಸಿದ್ದರಾಮಯ್ಯ ಅವರನ್ನ ನೇರವಾಗಿ ಕಾಂಗ್ರೆಸ್ ಪಕ್ಷ ಸಿಎಂ ಮಾಡಿಲ್ಲ. ಪ್ರತಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ಅವರನ್ನು ಸಿಎಂ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ.
ಮಳವಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಲೂ ನಮ್ಮ ಪಕ್ಷ ಶಾಸಕರ ಬಹುಮತದ ಅಭಿಪ್ರಾಯಕ್ಕೆ ಬದ್ಧವಾಗಿದೆ. ೨೦೧೩ ರಲ್ಲೂ ವೋಟಿಂಗ್ ಮಾಡಿ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲಾಯ್ತು. ಇದು ನಮ್ಮ ಪಕ್ಷದ ಇಂಟರ್ನಲ್ ಡೆಮಾಕ್ರಸಿ. ಈಗಲೂ ನಮ್ಮ ಕಾಂಗ್ರೆಸ್ ಪಕ್ಷ ಈ ಡೆಮಾಕ್ರಸಿಗೆ ಬದ್ಧವಾಗಿದೆ ಎಂದರು.
ಅಲ್ಲದೆ ಪಕ್ಷದ ಭವಿಷ್ಯದ ದೃಷ್ಠಿಯಿಂದ ಸಮಯ ಸಂದರ್ಭ ನೋಡಿ ಬೇರೆಯವರಿಗೆ ಅವಕಾಶವನ್ನು ಮಾಡಿಕೊಡಲಾಗುತ್ತದೆ. ಯಾರನ್ನೋ ಓಲೈಕೆಗೆ ಹಾಗೂ ಹೊಗಳಿಕೆಗೆ ಸಿಎಂ ಬದಲಾವಣೆ ವಿಚಾರವನ್ನು ಮಾತನಾಡಬಾರದು. ಮೊದಲನೇ ಬಾರಿ ಆಯ್ಕೆಯಾದ ಶಾಸಕರು ಬಹಳ ಹಾರಾಡುತ್ತಿದ್ದಾರೆ. ಈ ರೀತಿ ಬಹಿರಂಗವಾಗಿ ಮಾತನಾಡದೇ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಮಂಡ್ಯದಲ್ಲಿ ಅತೀಹೆಚ್ಚು ಕಾಲ ಕಾಂಗ್ರೆಸ್ ಕಟ್ಟಿದವನು ನಾನು. ನಾನೇ ನನಗೆ ಅನ್ಯಾಯ ಆಯ್ತು ಅಂತ ಬೀದಿಯಲ್ಲಿ ಮಾತನಾಡೋಕೆ ಆಗುತ್ತಾ..? ಪಕ್ಷದ ತೀರ್ಮಾನಗಳನ್ನ ತಲೆಬಾಗಿ ಒಪ್ಪುತ್ತೇನೆ ಅದರಂತೆ ಎಲ್ಲರು ಮಾಡಬೇಕು ಎಂದು ಹೇಳಿದರು .
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…