ಮಂಡ್ಯ: ಜೀವನೋಪಯಕ್ಕೆ ಕೌಶಲ್ಯ ತರಬೇತಿ ಪಡೆದು ತರಬೇತಿಗಳ ಸದುಪಯೋಗ ಪಡೆಯುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ತಿಳಿಸಿದರು.
ಇಂದು (ಫೆ.07) ನಗರದ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಮಂಡ್ಯ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಡ್ಯ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಫಾಟಿಸಿ ಮಾತನಾಡಿದರು.
ಕೌಶಲ್ಯ ತರಬೇತಿ ಪಡೆದರೆ ನಿಮ್ಮ ಜೀವನದಲ್ಲಿ ಕೌಶಲ್ಯವನ್ನು ರೂಪಿಸಿಕೊಳ್ಳಬಹುದು, ಇದರಿಂದ ಜೀವನ ನಿರ್ವಹಣೆಗೆ ಅನುಕೂಲಕರವಾಗಲಿದೆ, ಉದ್ಯೋಗ ದೊರಕುವ ಆತ್ಮ ವಿಶ್ವಾಸ ಹೆಚ್ಚಾಗಲಿದೆ, ಇಂತಹ ತರಬೇತಿಯಿಂದ ಸಂದರ್ಶನಗಳನ್ನು ಯಾವ ರೀತಿ ಎದುರಿಸುವುದು ಎಂದು ತಿಳಿಯಲಿದೆ ಎಂದು ತಿಳಿಸಿದರು.
ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯ. ಸರ್ಕಾರ, ಖಾಸಗಿ ಸಂಸ್ಥೆಗಳು ಹಾಗೂ ಮಠಗಳು ಶಿಕ್ಷಣ ನೀಡುತ್ತಿವೆ. ವಿದ್ಯೆಯ ಜೊತೆಗೆ ಬುದ್ದಿ ಮತ್ತು ಜ್ಞಾನ ಬೆಳಿಸಿಕೊಂಡು ಸ್ವಯಂ ಉದ್ಯೋಗ ಮಾಡಲು ನೀವು ಮುಂದೆ ಬರಬೇಕು, ಇಂದು ಸ್ವಯಂ ಉದ್ಯೋಗ ಮಾಡಲು ಸರ್ಕಾರದಲ್ಲಿ ಅನೇಕ ಸೌಲಭ್ಯಗಳು ದೊರೆಯುತ್ತಿದ್ದು ಅದನ್ನು ಸದುಪಯೋಗಪಡೆಸಿಕೊಳ್ಳುವಂತೆ ತಿಳಿಸಿದರು.
ಡಿಸೆಂಬರ್ ಮಾಹೆಯ ಒಳಗೆ ಏಳು ತಾಲೂಕಿನ ನಿರುದ್ಯೋಗಿಗಳಿಗೆ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಏರ್ಪಡಿಸಲು ಉದ್ದೇಶಿಸಲಾಗಿದೆ, ಉದ್ಯೋಗ ಮೇಳದಲ್ಲಿ 30 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು 400 ಕ್ಕೂ ಹೆಚ್ಚು ನಿರುದ್ಯೋಗಿಗಳು ನೊಂದಾಯಿಸಿಕೊಂಡಿದ್ದಾರೆ ಎಂದರು.
ಮಂಡ್ಯ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಪಿ.ರವಿಕುಮಾರ್, ಮಂಡ್ಯ ವಿಶ್ವವಿದ್ಯಾಲಯದ ಉಪ ಕುಲಪತಿ ಶಿವಚಿತ್ತಪ್ಪ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಾಗೂ ಇತರರು ಉಪಸ್ಥಿತರಿದ್ದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…