ಮಂಡ್ಯ

ಜೀವನೋಪಯಕ್ಕೆ ಕೌಶಲ್ಯ ತರಬೇತಿ ಮುಖ್ಯ: ಚಲುವರಾಯಸ್ವಾಮಿ

ಮಂಡ್ಯ: ಜೀವನೋಪಯಕ್ಕೆ ಕೌಶಲ್ಯ ತರಬೇತಿ ಪಡೆದು ತರಬೇತಿಗಳ ಸದುಪಯೋಗ ಪಡೆಯುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ತಿಳಿಸಿದರು.

ಇಂದು (ಫೆ.07) ನಗರದ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಮಂಡ್ಯ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಡ್ಯ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಫಾಟಿಸಿ ಮಾತನಾಡಿದರು.

ಕೌಶಲ್ಯ ತರಬೇತಿ ಪಡೆದರೆ ನಿಮ್ಮ ಜೀವನದಲ್ಲಿ ಕೌಶಲ್ಯವನ್ನು ರೂಪಿಸಿಕೊಳ್ಳಬಹುದು, ಇದರಿಂದ ಜೀವನ ನಿರ್ವಹಣೆಗೆ ಅನುಕೂಲಕರವಾಗಲಿದೆ, ಉದ್ಯೋಗ ದೊರಕುವ ಆತ್ಮ ವಿಶ್ವಾಸ ಹೆಚ್ಚಾಗಲಿದೆ, ಇಂತಹ ತರಬೇತಿಯಿಂದ ಸಂದರ್ಶನಗಳನ್ನು ಯಾವ ರೀತಿ ಎದುರಿಸುವುದು ಎಂದು ತಿಳಿಯಲಿದೆ ಎಂದು ತಿಳಿಸಿದರು.

ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯ. ಸರ್ಕಾರ, ಖಾಸಗಿ ಸಂಸ್ಥೆಗಳು ಹಾಗೂ ಮಠಗಳು ಶಿಕ್ಷಣ ನೀಡುತ್ತಿವೆ. ವಿದ್ಯೆಯ ಜೊತೆಗೆ ಬುದ್ದಿ ಮತ್ತು ಜ್ಞಾನ ಬೆಳಿಸಿಕೊಂಡು ಸ್ವಯಂ ಉದ್ಯೋಗ ಮಾಡಲು ನೀವು ಮುಂದೆ ಬರಬೇಕು, ಇಂದು ಸ್ವಯಂ ಉದ್ಯೋಗ ಮಾಡಲು ಸರ್ಕಾರದಲ್ಲಿ ಅನೇಕ ಸೌಲಭ್ಯಗಳು ದೊರೆಯುತ್ತಿದ್ದು ಅದನ್ನು ಸದುಪಯೋಗಪಡೆಸಿಕೊಳ್ಳುವಂತೆ ತಿಳಿಸಿದರು.

ಡಿಸೆಂಬರ್ ಮಾಹೆಯ ಒಳಗೆ ಏಳು ತಾಲೂಕಿನ ನಿರುದ್ಯೋಗಿಗಳಿಗೆ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಏರ್ಪಡಿಸಲು ಉದ್ದೇಶಿಸಲಾಗಿದೆ, ಉದ್ಯೋಗ ಮೇಳದಲ್ಲಿ 30 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು 400 ಕ್ಕೂ ಹೆಚ್ಚು ನಿರುದ್ಯೋಗಿಗಳು ನೊಂದಾಯಿಸಿಕೊಂಡಿದ್ದಾರೆ ಎಂದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಪಿ.ರವಿಕುಮಾರ್, ಮಂಡ್ಯ ವಿಶ್ವವಿದ್ಯಾಲಯದ ಉಪ ಕುಲಪತಿ ಶಿವಚಿತ್ತಪ್ಪ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಾಗೂ ಇತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

7 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

16 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

16 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

16 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

19 hours ago