ಮಂಡ್ಯ: ‘ನಮ್ಮಲ್ಲಿ ನುರಿತ ಕೌಶಲವಿದ್ದರೆ ಉದ್ಯೋಗ ಮತ್ತು ಯಶಸ್ಸು ಲಭಿಸಲಿದೆ. ಯಶಸ್ಸು ನಿರಂತರ ಬೇಕೆಂದರೆ ನಮ್ಮಲ್ಲಿರುವ ಕಾರ್ಯ ಕುಶಲತೆ ಕೊನೆಯಾಗಕೂಡದು’ ಎಂದು ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.
ನಗರದ ‘ಗಾಂಧಿ ಭವನ’ದಲ್ಲಿ ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟಿನ ಕಸ್ತೂರಿ ಬಾ ಮಹಿಳೆಯರ ಉಚಿತ ಹೊಲಿಗೆ ತರಬೇತಿ ಕೇಂದ್ರ ವತಿಯಿಂದ ಶನಿವಾರ ಆಯೋಜಿಸಿದ್ದ 49ನೇ ಶಿಬಿರದ ಸಮಾರೋಪ ಹಾಗೂ 50ನೇ ಹೊಸ ಬ್ಯಾಚ್ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪು ಸಿದ್ಧಗೊಳಿಸುವ ಉದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಹಾಗಾಗಿ, ಶಿಬಿರದಲ್ಲಿ ಕಲಿತದ್ದನ್ನು ಮರೆಯದೆ, ವೃತ್ತಿಯಲ್ಲಿ ನೈಪುಣ್ಯ ಸಾಧಿಸಿ. ಆರ್ಥಿಕವಾಗಿ ಸಬಲರಾಗಿ. ಸ್ಫೂರ್ತಿಯುತ ಬದುಕು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದರು.
ಟ್ರಸ್ಟ್ ವತಿಯಿಂದ ವರ್ಗ ಮತ್ತು ಧರ್ಮ ಭೇದವಿಲ್ಲದೆ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ತರಬೇತಿ ನೀಡುತ್ತಾ ಬಂದಿದ್ದೇವೆ. ಈವರೆಗೂ ಸುಮಾರು 3000 ಮಹಿಳೆಯರು ತರಬೇತಿ ಪಡೆದಿದ್ದಾರೆ. ನೀವು ಹೊಲಿಗೆ ವೃತ್ತಿಯಲ್ಲಿ ನೈಪುಣ್ಯ ಸಾಧಿಸಿದರೆ ನಮ್ಮ ಸಂಸ್ಥೆ ವತಿಯಿಂದಲೇ ಉದ್ಯೋಗ ಅವಕಾಶವನ್ನೂ ಕಲ್ಪಿಸಲಾಗುವುದು ಎಂದರು.
ಟ್ರಸ್ಟ್ ನ ಕಾರ್ಯದರ್ಶಿ ನಂಜೇಗೌಡ ಮಾತನಾಡಿ, ಮಹಿಳೆಯರು ಮನೆಗೆಲಸ, ಮಕ್ಕಳ ಪೋಷಣೆ, ಕುಟುಂಬ ನಿರ್ವಹಣೆಯಂತಹ ಜವಾಬ್ದಾರಿಗಳ ನಡುವೆ ತರಬೇತಿ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆರ್ಥಿಕ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಇದೇ ಸಂದರ್ಭದಲ್ಲಿ ಹೊಲಿಗೆ ಉಚಿತ ತರಬೇತಿ ಪೂರೈಸಿದ 49ನೇ ಬ್ಯಾಚಿನ 83 ಕಲಿಕಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಮಹಾತ್ಮ ಗಾಂಧಿ ಟ್ರಸ್ಟಿನ ಲಿಂಗಣ್ಣ ಬಂಧುಕಾರ್, ಹೊಲಿಗೆ ತರಬೇತಿ ಶಿಕ್ಷಕಿ ಅನಿತಾ, ನಾಗರತ್ನ ಕೆ.ಎಸ್.ರಾಜು ಇದ್ದರು.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…