ಮಂಡ್ಯ: ‘ನಮ್ಮಲ್ಲಿ ನುರಿತ ಕೌಶಲವಿದ್ದರೆ ಉದ್ಯೋಗ ಮತ್ತು ಯಶಸ್ಸು ಲಭಿಸಲಿದೆ. ಯಶಸ್ಸು ನಿರಂತರ ಬೇಕೆಂದರೆ ನಮ್ಮಲ್ಲಿರುವ ಕಾರ್ಯ ಕುಶಲತೆ ಕೊನೆಯಾಗಕೂಡದು’ ಎಂದು ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.
ನಗರದ ‘ಗಾಂಧಿ ಭವನ’ದಲ್ಲಿ ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟಿನ ಕಸ್ತೂರಿ ಬಾ ಮಹಿಳೆಯರ ಉಚಿತ ಹೊಲಿಗೆ ತರಬೇತಿ ಕೇಂದ್ರ ವತಿಯಿಂದ ಶನಿವಾರ ಆಯೋಜಿಸಿದ್ದ 49ನೇ ಶಿಬಿರದ ಸಮಾರೋಪ ಹಾಗೂ 50ನೇ ಹೊಸ ಬ್ಯಾಚ್ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪು ಸಿದ್ಧಗೊಳಿಸುವ ಉದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಹಾಗಾಗಿ, ಶಿಬಿರದಲ್ಲಿ ಕಲಿತದ್ದನ್ನು ಮರೆಯದೆ, ವೃತ್ತಿಯಲ್ಲಿ ನೈಪುಣ್ಯ ಸಾಧಿಸಿ. ಆರ್ಥಿಕವಾಗಿ ಸಬಲರಾಗಿ. ಸ್ಫೂರ್ತಿಯುತ ಬದುಕು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದರು.
ಟ್ರಸ್ಟ್ ವತಿಯಿಂದ ವರ್ಗ ಮತ್ತು ಧರ್ಮ ಭೇದವಿಲ್ಲದೆ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ತರಬೇತಿ ನೀಡುತ್ತಾ ಬಂದಿದ್ದೇವೆ. ಈವರೆಗೂ ಸುಮಾರು 3000 ಮಹಿಳೆಯರು ತರಬೇತಿ ಪಡೆದಿದ್ದಾರೆ. ನೀವು ಹೊಲಿಗೆ ವೃತ್ತಿಯಲ್ಲಿ ನೈಪುಣ್ಯ ಸಾಧಿಸಿದರೆ ನಮ್ಮ ಸಂಸ್ಥೆ ವತಿಯಿಂದಲೇ ಉದ್ಯೋಗ ಅವಕಾಶವನ್ನೂ ಕಲ್ಪಿಸಲಾಗುವುದು ಎಂದರು.
ಟ್ರಸ್ಟ್ ನ ಕಾರ್ಯದರ್ಶಿ ನಂಜೇಗೌಡ ಮಾತನಾಡಿ, ಮಹಿಳೆಯರು ಮನೆಗೆಲಸ, ಮಕ್ಕಳ ಪೋಷಣೆ, ಕುಟುಂಬ ನಿರ್ವಹಣೆಯಂತಹ ಜವಾಬ್ದಾರಿಗಳ ನಡುವೆ ತರಬೇತಿ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆರ್ಥಿಕ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಇದೇ ಸಂದರ್ಭದಲ್ಲಿ ಹೊಲಿಗೆ ಉಚಿತ ತರಬೇತಿ ಪೂರೈಸಿದ 49ನೇ ಬ್ಯಾಚಿನ 83 ಕಲಿಕಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಮಹಾತ್ಮ ಗಾಂಧಿ ಟ್ರಸ್ಟಿನ ಲಿಂಗಣ್ಣ ಬಂಧುಕಾರ್, ಹೊಲಿಗೆ ತರಬೇತಿ ಶಿಕ್ಷಕಿ ಅನಿತಾ, ನಾಗರತ್ನ ಕೆ.ಎಸ್.ರಾಜು ಇದ್ದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…