ಮಂಡ್ಯ

ನುರಿತ ಕೌಶಲವಿದ್ದರೆ ಉದ್ಯೋಗ ಮತ್ತು ಯಶಸ್ಸು: ಮಧು ಜಿ.ಮಾದೇಗೌಡ

ಮಂಡ್ಯ: ‘ನಮ್ಮಲ್ಲಿ ನುರಿತ ಕೌಶಲವಿದ್ದರೆ ಉದ್ಯೋಗ ಮತ್ತು ಯಶಸ್ಸು ಲಭಿಸಲಿದೆ. ಯಶಸ್ಸು ನಿರಂತರ ಬೇಕೆಂದರೆ ನಮ್ಮಲ್ಲಿರುವ ಕಾರ್ಯ ಕುಶಲತೆ ಕೊನೆಯಾಗಕೂಡದು’ ಎಂದು ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.

ನಗರದ ‘ಗಾಂಧಿ ಭವನ’ದಲ್ಲಿ ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟಿನ ಕಸ್ತೂರಿ ಬಾ ಮಹಿಳೆಯರ ಉಚಿತ ಹೊಲಿಗೆ ತರಬೇತಿ ಕೇಂದ್ರ ವತಿಯಿಂದ ಶನಿವಾರ ಆಯೋಜಿಸಿದ್ದ 49ನೇ ಶಿಬಿರದ ಸಮಾರೋಪ ಹಾಗೂ 50ನೇ ಹೊಸ ಬ್ಯಾಚ್ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪು ಸಿದ್ಧಗೊಳಿಸುವ ಉದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಹಾಗಾಗಿ, ಶಿಬಿರದಲ್ಲಿ ಕಲಿತದ್ದನ್ನು ಮರೆಯದೆ, ವೃತ್ತಿಯಲ್ಲಿ ನೈಪುಣ್ಯ ಸಾಧಿಸಿ. ಆರ್ಥಿಕವಾಗಿ ಸಬಲರಾಗಿ. ಸ್ಫೂರ್ತಿಯುತ ಬದುಕು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದರು.

ಟ್ರಸ್ಟ್ ವತಿಯಿಂದ ವರ್ಗ ಮತ್ತು ಧರ್ಮ ಭೇದವಿಲ್ಲದೆ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ತರಬೇತಿ ನೀಡುತ್ತಾ ಬಂದಿದ್ದೇವೆ. ಈವರೆಗೂ ಸುಮಾರು 3000 ಮಹಿಳೆಯರು ತರಬೇತಿ ಪಡೆದಿದ್ದಾರೆ. ನೀವು ಹೊಲಿಗೆ ವೃತ್ತಿಯಲ್ಲಿ ನೈಪುಣ್ಯ ಸಾಧಿಸಿದರೆ ನಮ್ಮ ಸಂಸ್ಥೆ ವತಿಯಿಂದಲೇ ಉದ್ಯೋಗ ಅವಕಾಶವನ್ನೂ ಕಲ್ಪಿಸಲಾಗುವುದು ಎಂದರು.

ಟ್ರಸ್ಟ್ ನ ಕಾರ್ಯದರ್ಶಿ ನಂಜೇಗೌಡ ಮಾತನಾಡಿ, ಮಹಿಳೆಯರು ಮನೆಗೆಲಸ, ಮಕ್ಕಳ ಪೋಷಣೆ, ಕುಟುಂಬ ನಿರ್ವಹಣೆಯಂತಹ ಜವಾಬ್ದಾರಿಗಳ ನಡುವೆ ತರಬೇತಿ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆರ್ಥಿಕ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಇದೇ ಸಂದರ್ಭದಲ್ಲಿ ಹೊಲಿಗೆ ಉಚಿತ ತರಬೇತಿ ಪೂರೈಸಿದ 49ನೇ ಬ್ಯಾಚಿನ 83 ಕಲಿಕಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಮಹಾತ್ಮ ಗಾಂಧಿ ಟ್ರಸ್ಟಿನ ಲಿಂಗಣ್ಣ ಬಂಧುಕಾರ್, ಹೊಲಿಗೆ ತರಬೇತಿ ಶಿಕ್ಷಕಿ ಅನಿತಾ, ನಾಗರತ್ನ ಕೆ.ಎಸ್.ರಾಜು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago