ಮಂಡ್ಯ: ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದಿದ್ದ ಸೈನಿಕ ರಾಘವೇಂದ್ರ ರಕ್ಷಣಾ ಇಲಾಖೆ ಸೇನಾಧಿಕಾರಿಗಳ ತುರ್ತು ಕರೆ ಮೇರೆಗೆ ಕರ್ತವ್ಯಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಅಭಿನಂದಿಸಿ, ಕಳುಹಿಸಿದರು.
ಮೂಲತಃ ಮಂಡ್ಯ ತಾಲ್ಲೂಕಿನ ಹಲ್ಲೇಗೆರೆ ಗ್ರಾಮದ ಸುಬ್ಬೇಗೌಡ ಹಾಗೂ ನಿಂಗಮ್ಮ ದಂಪತಿಯ ಎರಡನೇ ಪುತ್ರ ರಾಘವೇಂದ್ರ ಎಂಬವರು ರಜೆ ಮೇರೆಗೆ ಸ್ವಗ್ರಾಮಕ್ಕೆ ಬಂದಿದ್ದರು. ತುರ್ತು ಕರೆ ಮೇರೆಗೆ ಅವರನ್ನು ನಿಯೋಜಿಸಿರುವ ಜಮ್ಮು ಕಾಶ್ಮೀರದ ಗಡಿ ಭಾಗ ಲಡಾಕ್ಗೆ ತೆರಳಿದರು. ಈ ವೇಳೆ ಬಡಾವಣೆ ಮುಖಂಡರಾದ ಅಶೋಕ್, ಗೋವಿಂದರಾಜು, ಕೃಷ್ಣಪ್ಪ, ರಾಮಲಿಂಗಯ್ಯ, ಮಹದೇವಸ್ವಾಮಿ, ನಟರಾಜು, ಕುಮಾರ್, ಕೆಂಪರಾಜು, ವೆಂಕಟರಾಮು, ರಾಘು, ಕಿರಣ್, ಲತಾ, ಸುನೀತಾ ಹಾಗೂ ಕುಟುಂಬದ ಸದಸ್ಯರು ಹಾಜರಿದ್ದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…