ಮಂಡ್ಯ

ಕುಮಾರಸ್ವಾಮಿ ಸಾಚಾ ಅಲ್ಲ ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ: ಕದಲೂರು ಉದಯ್‌

ಮಂಡ್ಯ: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿದ್ದು, ಸದ್ಯ ಮದ್ದೂರು ಕಾಂಗ್ರೆಸ್‌ ಶಾಸಕ ಕದಲೂರು ಉದಯ್‌ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಕುಮಾರಸ್ವಾಮಿ ಏನೂ ಸಾಚಾ ಅಲ್ಲ, ರೇವಣ್ಣನಂತೆ ಕುಮಾರಸ್ವಾಮಿಯೂ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ. ಕುಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ರಾಧಿಕಾ ಅವರನ್ನು ಪತ್ನಿ ರೀತಿ ಕಾಣುತ್ತಿದ್ದಾರಾ? ಇಷ್ಟು ದಿನ ಯಾರೂ ದೂರು ಕೊಡಲು ಧೈರ್ಯ ಮಾಡಿರಲಿಲ್ಲ. ಪೆನ್‌ಡ್ರೈವ್‌ ಪ್ರಕರಣದ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ. ಯಾರಾದರೂ ದೂರು ಕೊಟ್ಟರೆ ಸರ್ಕಾರ ತನಿಖೆ ಮಾಡಲಿದೆ ಎಂದು ಕದಲೂರು ಉದಯ್‌ ಹೇಳಿದರು.

ಕುಮಾರಸ್ವಾಮಿ ಏನ್‌ ಸಾಚಾನಾ? ಮಗಳ ವಯಸ್ಸಿನವರನ್ನ ಪುಸಲಾಯಿಸಿ ಮಗು ಹುಟ್ಟಿಸಿ ರೋಡ್‌ಗೆ ಬಿಟ್ಟಿದ್ದಾರೆ. ಕುಮಾರಸ್ವಾಮಿ ನೀಚ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಆಗಿದ್ದವರು ಇಂತಹ ನೀಚ ಕೆಲಸ ಮಾಡುತ್ತಾರಾ? ಜೀವನದುದ್ದಕ್ಕೂ ಬ್ಲಾಕ್‌ಮೇಲ್‌, ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ. ಬೇರೆಯವರನ್ನು ಮುಳುಗಿಸಿದ್ದೇ ಕುಮಾರಸ್ವಾಮಿ ಸಾಧನೆ. ಇವರ ಮನೆ ಹೆಣ್ಣು ಮಕ್ಕಳ ಮರ್ಯಾದೆ ರೋಡ್‌ನಲ್ಲಿ ಹರಾಜಾಗಿದ್ರೆ ಪ್ರತಿಭಟನೆ ಮಾಡ್ತಿದ್ರಾ? ಎಂದು ವಾಗ್ದಾಳಿ ನಡೆಸಿದರು.

ಅಲ್ಲದೇ ಪ್ರಜ್ವಲ್‌ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕೈವಾಡವಿದೆ ಎಂದು ಜೆಡಿಎಸ್‌ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಬಗ್ಗೆಯೂ ಸಹ ಮಾತನಾಡಿದ ಉದಯ್‌ ಪ್ರಜ್ವಲ್‌ ವಿಡಿಯೊವನ್ನು ಸರ್ಕಾರ ಮಾಡಿಸಿತ್ತಾ? ಅವನೇ ವಿಡಿಯೊ ಮಾಡಿಕೊಂಡಿದ್ದ. ಪ್ರಜ್ವಲ್‌ ಜೆಡಿಎಸ್‌ ಸಂಸದ. ಜೆಡಿಎಸ್‌ ಒಂದು ಕುಟುಂಬಕ್ಕೆ ಸೀಮಿತವಾದ ಪಕ್ಷ. ಇದು ಒಂದು ಕುಟುಂಬಕ್ಕೆ ಸೇರಿದ ವಿಚಾರ. ಈ ವಿಚಾರವಾಗಿ ಕುಮಾರಸ್ವಾಮಿ ಕ್ಷಮೆ ಕೇಳಬೇಕು. ಆದರೆ ಕಾರ್ಯಕರ್ತರನ್ನು ಎತ್ತಿಕಟ್ಟಿ ಪ್ರತಿಭಟನೆ ಮಾಡಿಸಿ ಉಪಮುಖ್ಯಮಂತ್ರಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಜೆಡಿಎಸ್‌ ಕಾರ್ಯಕರ್ತರು ಯಾವ ಪುರುಷಾರ್ಥಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ, ಸಾಕಷ್ಟು ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ. ಜೆಡಿಎಸ್‌ನ ನಾಯಕರು ಇದರ ಬಗ್ಗೆ ದನಿ ಎತ್ತಿಲ್ಲ. ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಲಿಲ್ಲ. ಇವರ ಮನೆ ಹೆಣ್ಣುಮಕ್ಕಳು ಆಗಿದ್ರೆ ಹೀಗೆ ಮಾಡುತ್ತಿದ್ರಾ? ಯಾವ ನೈತಿಕತೆ ಇಟ್ಟುಕೊಂಡು ಜೆಡಿಎಸ್‌ ಪ್ರತಿಭಟನೆ ಮಾಡುತ್ತಿದೆ? ಕಾಂಗ್ರೆಸ್‌ ಸರ್ಕಾರವನ್ನು ನೀಚ ಸರ್ಕಾರ ಅಂತಾರೆ. ಬಡವರಿಗೆ ಯೋಜನೆಗಳನ್ನು ಕೊಟ್ಟ ಸರ್ಕಾರ ನೀಚ ಸರ್ಕಾರನಾ? ಎಂದು ಹರಿಹಾಯ್ದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago