ಮಂಡ್ಯ

ಮಂಡ್ಯ: ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್‌ಮೇಲ್

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಕಿರಾತಕ ಮಗನೋರ್ವ ತಂದೆಗೆ ಬ್ಲಾಕ್‌ ಮೇಲ್‌ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

ಮದ್ದೂರಿನ ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್‌ ಎಂಬುವವರ ಮಗ ಪ್ರಣವ್‌ ಎಂಬಾತನೇ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆಸಾಮಿಯಾಗಿದ್ದಾನೆ. ವಾಟ್ಸಪ್ ಗ್ರೂಪ್‌ಗೆ ಅಪ್ಪನ ಅಶ್ಲೀಲ ಸಂದೇಶ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಘಟನೆಯಿಂದ ರೊಚ್ಚಿಗೆದ್ದ ತಂದೆ ಸತೀಶ್‌ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿ ಮಗನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನು ಓದಿ:ಮೈಸೂರು | ಆಸ್ತಿ ವಿಚಾರ ; ಅಣ್ಣನನ್ನು ಕೊಂದು ಎಸ್ಕೇಪ್‌ ಆದ ತಮ್ಮ : ಪೊಲೀಸರಿಂದ ಶೋಧ

ಉದ್ಯಮಿ ಸತೀಶ್‌ ಅವರು, ಮದ್ದೂರು ಸೇರಿದಂತೆ ರಾಜ್ಯದ ಹಲವೆಡೆ ರಾಣಿ ಐಶ್ವರ್ಯ ಡೆವಲಪರ್ಸ್ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದಾರೆ. ಮಗ ಪ್ರಣವ್‌ ದುಶ್ಚಟಗಳಿಗೆ ಬಲಿಯಾಗಿ ವಿರೋಧಿಗಳ ಜೊತೆ ಸೇರಿ ಆಸ್ತಿಗಾಗಿ ತಂದೆ ಜೊತೆಯೇ ಕಿರಿಕ್ ಮಾಡಿದ್ದನು.

ಈಗಾಗಲೇ ತಂದೆಯ ಕೋಟ್ಯಾಂತರ ರೂ ಹಣವನ್ನು ಹಾಳು ಮಾಡಿದ್ದಲ್ಲದೇ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದನು. ಹಣ ಕೊಡದ ತಂದೆಗೆ ಬುದ್ಧಿ ಕಲಿಸಲು ಕೆಲವರ ಜೊತೆ ಸೇರಿದ ಪ್ರಣವ್ ಅಪ್ಪನ ಭಾವಚಿತ್ರಕ್ಕೆ ಅಶ್ಲೀಲ ಚಿತ್ರ ಹಾಗು ವಾಯ್ಸ್ ಎಡಿಟ್ ಮಾಡಿ ವಾಟ್ಸಪ್ ಗ್ರೂಪ್‌ಗೆ ಹಾಕಿ‌ ಬ್ಲಾಕ್‌ಮೇಲ್ ಮಾಡಿದ್ದ.

ಈ ಹಿನ್ನೆಲೆಯಲ್ಲಿ ಪ್ರಚೋದಿಸಿದವರು ಸೇರಿದಂತೆ ಮಗನ ವಿರುದ್ಧ ಸತೀಶ್‌ ಮದ್ದೂರು ಠಾಣೆಗೆ ದೂರು ನೀಡಿದ್ದರು. ತಂದೆಯ ದೂರಿನ ಮೇರೆಗೆ ಆರೋಪಿಗಳಾದ ಮಗ ಪ್ರಣವ್, ಮಹೇಶ, ಈಶ್ವರ್ ಹಾಗೂ ಪ್ರೀತಮ್ ಎಂಬುವವರನ್ನು ಬಂಧಿಸಲಾಗಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago