ಮಂಡ್ಯ

ಸೋನಿಯಾ, ರಾಹುಲ್ ಬಂದಿದ್ದಕ್ಕೆ  ಮಂಡ್ಯ ಜನರಿಗೆ ದೇವೇಗೌಡರ ಮೇಲಿನ ಪ್ರೀತಿ ಕಡಿಮೆ ಆಗಲ್ಲ’

ಮಂಡ್ಯ  : ಸಕ್ಕರೆ ನಾಡು ಮಂಡ್ಯ ಜಿಲ್ಲೆಯು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ. ಅಲ್ಲಿಗೆ ಸೋನಿಯಾ ಗಾಂಧಿಯವರು ಬರಲಿ, ರಾಹುಲ್ ಗಾಂಧಿಯವರು ಬರಲಿ. ಮಂಡ್ಯದ ಜನತೆ ಮಾಜಿ ಪ್ರಧಾನಿ ದೇವೇಗೌಡರ ಮೇಲಿಟ್ಟಿರುವ ಪ್ರೀತಿ ಒಂದಿಷ್ಟೂ ಕಡಿಮೆಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದ ಚಿಕ್ಕ ಬೋರೇಗೌಡನ ದೊಡ್ಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ‘‘ಮಂಡ್ಯದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಪಾದಯಾತ್ರೆ ನಡೆಸುವುದರ ಬಗ್ಗೆ ನಿಮ್ಮ ಅಭಿಪ್ರಾಯವೇನು’’ ಎಂದು ಕೇಳಲಾದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು. ಅಲ್ಲದೆ, ‘’ಮಂಡ್ಯ ಜಿಲ್ಲೆಯು ಯಾವತ್ತೂ ಜೆಡಿಎಸ್ ನ ಭದ್ರಕೋಟೆಯಾಗಿರುತ್ತೆ. ಹಿಂದೆಯೂ ಮುಂದೆಯೂ ಅದು ಅದೇ ರೀತಿಯಲ್ಲೇ ಮುಂದುವರಿಯುತ್ತದೆ’’ ಎಂದು ಹೇಳಿದರು.

ಇದೇ ಮಾತುಕತೆ ವೇಳೆ ಚನ್ನಪಟ್ಟಣದಲ್ಲಿ ಇತ್ತೀಚೆಗೆ ನಡೆದಿರುವ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ವಿಚಾರ ಪ್ರಸ್ತಾಪವಾಯಿತು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ‘’ಚನ್ನಪಟ್ಟಣ ಕೂಡ ಜೆಡಿಎಸ್ ನ ಭದ್ರಕೋಟೆಯೇ ಆಗಿದೆ. ಮುಂಬರುವ ಚುನಾವಣೆಯಲ್ಲಿ ಅಲ್ಲಿನ ಮತದಾರರು ಅದನ್ನು ಸಾಬೀತುಪಡಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಅದನ್ನು ಸರಿಪಡಿಸಬೇಕಿದೆ’’ ಎಂದು ತಿಳಿಸಿದರು.

 

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago