ಮಂಡ್ಯ

ಸೋನಿಯಾ, ರಾಹುಲ್ ಬಂದಿದ್ದಕ್ಕೆ  ಮಂಡ್ಯ ಜನರಿಗೆ ದೇವೇಗೌಡರ ಮೇಲಿನ ಪ್ರೀತಿ ಕಡಿಮೆ ಆಗಲ್ಲ’

ಮಂಡ್ಯ  : ಸಕ್ಕರೆ ನಾಡು ಮಂಡ್ಯ ಜಿಲ್ಲೆಯು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ. ಅಲ್ಲಿಗೆ ಸೋನಿಯಾ ಗಾಂಧಿಯವರು ಬರಲಿ, ರಾಹುಲ್ ಗಾಂಧಿಯವರು ಬರಲಿ. ಮಂಡ್ಯದ ಜನತೆ ಮಾಜಿ ಪ್ರಧಾನಿ ದೇವೇಗೌಡರ ಮೇಲಿಟ್ಟಿರುವ ಪ್ರೀತಿ ಒಂದಿಷ್ಟೂ ಕಡಿಮೆಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದ ಚಿಕ್ಕ ಬೋರೇಗೌಡನ ದೊಡ್ಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ‘‘ಮಂಡ್ಯದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಪಾದಯಾತ್ರೆ ನಡೆಸುವುದರ ಬಗ್ಗೆ ನಿಮ್ಮ ಅಭಿಪ್ರಾಯವೇನು’’ ಎಂದು ಕೇಳಲಾದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು. ಅಲ್ಲದೆ, ‘’ಮಂಡ್ಯ ಜಿಲ್ಲೆಯು ಯಾವತ್ತೂ ಜೆಡಿಎಸ್ ನ ಭದ್ರಕೋಟೆಯಾಗಿರುತ್ತೆ. ಹಿಂದೆಯೂ ಮುಂದೆಯೂ ಅದು ಅದೇ ರೀತಿಯಲ್ಲೇ ಮುಂದುವರಿಯುತ್ತದೆ’’ ಎಂದು ಹೇಳಿದರು.

ಇದೇ ಮಾತುಕತೆ ವೇಳೆ ಚನ್ನಪಟ್ಟಣದಲ್ಲಿ ಇತ್ತೀಚೆಗೆ ನಡೆದಿರುವ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ವಿಚಾರ ಪ್ರಸ್ತಾಪವಾಯಿತು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ‘’ಚನ್ನಪಟ್ಟಣ ಕೂಡ ಜೆಡಿಎಸ್ ನ ಭದ್ರಕೋಟೆಯೇ ಆಗಿದೆ. ಮುಂಬರುವ ಚುನಾವಣೆಯಲ್ಲಿ ಅಲ್ಲಿನ ಮತದಾರರು ಅದನ್ನು ಸಾಬೀತುಪಡಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಅದನ್ನು ಸರಿಪಡಿಸಬೇಕಿದೆ’’ ಎಂದು ತಿಳಿಸಿದರು.

 

andolana

Recent Posts

ಮಕ್ಕಳ ಜೊತೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದ ಪ್ರಧಾನಿ ನರೇಂದ್ರ ಮೋದಿ

ಗ್ಯಾಂಗ್ಟಕ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್‌ನಲ್ಲಿ ಮುಂಜಾನೆ ವೇಳೆ ಪ್ರಧಾನಿ…

59 mins ago

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ…

1 hour ago

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…

2 hours ago

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…

2 hours ago

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

4 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

4 hours ago