ಮಂಡ್ಯ: ರೈತ ಉತ್ಪನ್ನಗಳ ಮೇಲಿನ ಜಿಎಸ್ಟಿ ತೆಗೆಯುವುದು, ಕನಿಷ್ಠ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ಹತ್ತು ಹಲವು ರೈತಪರ ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಹೇಳಿದರು.
ನಾಗಮಂಗಲ ತಾಲೂಕಿನ ನಾನಾ ಗ್ರಾಮ ಪಂಚಾಯತಿ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಮತ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಮಾತನಾಡಿದರು.
ಶಾಶ್ವತವಾಗಿ ಕೊಬ್ಬರಿ ಖರೀದಿ, ಮಹಿಳೆಯರಿಗೆ ಪ್ರತಿ ವರ್ಷ 1 ಲಕ್ಷ, ಬೆಂಬಲ ಬೆಲೆ ಸೇರಿದಂತೆ ನಾನಾ ಗ್ಯಾರಂಟಿಗಳ ಭರವಸೆಗಳನ್ನು ಕಾಂಗ್ರೆಸ್ ನೀಡಿದ್ದು ಇದನ್ನು ಅನುಷ್ಠಾನಕ್ಕೆ ತರಲು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದರು.
ಇದೇ ವೇಳೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ನಮ್ಮ ಪ್ರತಿಸ್ಪರ್ಧಿ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಅಂತರಾಳದಲ್ಲಿ ಏನಿದೆ ಎಂಬುದು ಅವರ ಮಾತುಗಳಿಂದ ವ್ಯಕ್ತವಾಗುತ್ತಿವೆ. ಹಿಂದೆಯೂ ಸಹ ಮಹಿಳೆಯರ ಬಗ್ಗೆ ಅಗೌರವದ ಮಾತುಗಳನ್ನಾಡಿದ್ದರು. ಮಹಿಳೆಯರಿಗೆ ಅಪಮಾನವಾಗುವಂತಹ ಮಾತನಾಡಿ ಈಗ ವಿಷಾದ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ
ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕೈ ಹಿಡಿಯಲಿವೆಯೇ ಹೊರತು ಮೋದಿ ಗ್ಯಾರಂಟಿ ಏನು ವರ್ಕ್ ಆಗಲ್ಲ. ರಾಜ್ಯಕ್ಕೆ ಐದು ಗ್ಯಾರಂಟಿಗಳನ್ನು ನೀಡಿದ್ದೇವು. ಈಗ ರಾಷ್ಟ್ರವ್ಯಾಪಿ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮಾತನಾಡಿ, ನಾನು ಈ ಜಿಲ್ಲೆಯವನ್ನು, ರೈತನ ಮಗ. ರೈತರ ಕಷ್ಟ, ಜಿಲ್ಲೆಯ ನಾಡಿಮಿಡಿತ ನನಗೆ ಚೆನ್ನಾಗಿ ಗೊತ್ತಿದೆ. ದೇಶ್ಯವ್ಯಾಪಿ ಗ್ಯಾರಂಟಿ ಜಾರಿಗೆ ಕಾಂಗ್ರೆಸ್ ಬೆಂಬಲಿಸಿ, ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…
ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…
ಮೈಸೂರು: ಆರ್ಸಿಬಿ ಅಭಿಮಾನಿಗಳಿಗೆ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…
ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್ ಅವರನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…
ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…