ಮಂಡ್ಯ: ರೈತ ಉತ್ಪನ್ನಗಳ ಮೇಲಿನ ಜಿಎಸ್ಟಿ ತೆಗೆಯುವುದು, ಕನಿಷ್ಠ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ಹತ್ತು ಹಲವು ರೈತಪರ ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಹೇಳಿದರು.
ನಾಗಮಂಗಲ ತಾಲೂಕಿನ ನಾನಾ ಗ್ರಾಮ ಪಂಚಾಯತಿ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಮತ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಮಾತನಾಡಿದರು.
ಶಾಶ್ವತವಾಗಿ ಕೊಬ್ಬರಿ ಖರೀದಿ, ಮಹಿಳೆಯರಿಗೆ ಪ್ರತಿ ವರ್ಷ 1 ಲಕ್ಷ, ಬೆಂಬಲ ಬೆಲೆ ಸೇರಿದಂತೆ ನಾನಾ ಗ್ಯಾರಂಟಿಗಳ ಭರವಸೆಗಳನ್ನು ಕಾಂಗ್ರೆಸ್ ನೀಡಿದ್ದು ಇದನ್ನು ಅನುಷ್ಠಾನಕ್ಕೆ ತರಲು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದರು.
ಇದೇ ವೇಳೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ನಮ್ಮ ಪ್ರತಿಸ್ಪರ್ಧಿ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಅಂತರಾಳದಲ್ಲಿ ಏನಿದೆ ಎಂಬುದು ಅವರ ಮಾತುಗಳಿಂದ ವ್ಯಕ್ತವಾಗುತ್ತಿವೆ. ಹಿಂದೆಯೂ ಸಹ ಮಹಿಳೆಯರ ಬಗ್ಗೆ ಅಗೌರವದ ಮಾತುಗಳನ್ನಾಡಿದ್ದರು. ಮಹಿಳೆಯರಿಗೆ ಅಪಮಾನವಾಗುವಂತಹ ಮಾತನಾಡಿ ಈಗ ವಿಷಾದ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ
ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕೈ ಹಿಡಿಯಲಿವೆಯೇ ಹೊರತು ಮೋದಿ ಗ್ಯಾರಂಟಿ ಏನು ವರ್ಕ್ ಆಗಲ್ಲ. ರಾಜ್ಯಕ್ಕೆ ಐದು ಗ್ಯಾರಂಟಿಗಳನ್ನು ನೀಡಿದ್ದೇವು. ಈಗ ರಾಷ್ಟ್ರವ್ಯಾಪಿ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮಾತನಾಡಿ, ನಾನು ಈ ಜಿಲ್ಲೆಯವನ್ನು, ರೈತನ ಮಗ. ರೈತರ ಕಷ್ಟ, ಜಿಲ್ಲೆಯ ನಾಡಿಮಿಡಿತ ನನಗೆ ಚೆನ್ನಾಗಿ ಗೊತ್ತಿದೆ. ದೇಶ್ಯವ್ಯಾಪಿ ಗ್ಯಾರಂಟಿ ಜಾರಿಗೆ ಕಾಂಗ್ರೆಸ್ ಬೆಂಬಲಿಸಿ, ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…