ಶ್ರೀರಂಗಪಟ್ಟಣ: ಇಲ್ಲಿನ ಶ್ರೀ ರಂಗನಾಥಸ್ವಾಮಿ ದೇವಾಲಯ ರಥಸಪ್ತಮಿ ಕಾರ್ಯಕ್ರಮವು ಫೆಬ್ರವರಿ 5 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶ್ರೀರಂಗಪಟ್ಟಣ ಶಾಸಕ ರಾಮೇಶ್ ಬಂಡಿಸಿದ್ದೇಗೌಡ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಬ್ರಹ್ಮ ರಥ ಚಾಲನೆ ಮಾಡಲು ಯೋಗ್ಯವಾಗಿರುವ ಬಗ್ಗೆ ಪರಿಶೀಲಿಸಿ ಅಗತ್ಯವಿದ್ದಲ್ಲಿ ದುರಸ್ಥಿ ಪಡಿಸುವಂತೆ ತಿಳಿಸಿದರು.
ರಥ ಸಾಗುವ ರಸ್ತೆಗಳನ್ನು ಪರಿಶೀಲಿಸಿ ರಥ ಚಲಿಸುವ ಮಾರ್ಗದಲ್ಲಿ ಗುಂಡಿಗಳಿದ್ದಲ್ಲಿ ಸರಿಪಡಿಸಿ. ರಥ ಚಲಿಸುವ ರಸ್ತೆಯ ಎರಡು ಬದಿಗಳಲ್ಲಿ ಬೆಳೆದಿರುವ ಗಿಡ ಹಾಗೂ ಕಸವಿದ್ದಲ್ಲಿ ತೆರವು ಮಾಡಬೇಕು. ಜೋತು ಬಿದ್ದಿರುವ ವಿದ್ಯುತ್ ತಂತಿಗಳು ಇತರೆ ಕೇಬಲ್ ಗಳಿದ್ದಲ್ಲಿ ತೆರವುಗೊಳಿಸಲು ಸೂಚನೆ ನೀಡಿದರು.
ಅಗತ್ಯವಾದ ಸ್ಥಳಗಳಲ್ಲಿ ಆರಕ್ಷಕ ಸಿಬ್ಬಂದಿ, ಬ್ಯಾರಿಕೇಡ್ ವ್ಯವಸ್ಥೆ, ಸರ್ತಿ ಸಾಲಿನ ವ್ಯವಸ್ಥೆ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಅಗ್ನಿಶಾಮಕ ವಾಹನ ನಿಯೋಜನೆ, ಬ್ರಹ್ಮ ರಥ ಎಳೆಯುವಾಗ ಭಕ್ತಾದಿಗಳು ರಥದ ಸಮೀಪಕ್ಕೆ ಬರದಂತೆ ರೋಪ್ ಸರ್ಕಲ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ದೇವಾಸ್ಥಾನದ ಸಮೀಪವಿರುವ ರಸ್ತೆ ಮತ್ತು ಚರಂಡಿಗಳನ್ನು ಶುಚಿಗೊಳಿಸುವುದು,, ದೇವಾಲಯದ ಒಳಭಾಗ ಮತ್ತು ಹೊರ ಭಾಗದಲ್ಲಿ ಸ್ವಚ್ಛತೆ ಕಾಪಾಡುವುದು, ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತು ಜಾಗೃತಿ ಕ್ರಮ ವಹಿಸುವುದು ಅಗತ್ಯ ಎಂದು ಹೇಳಿದರು.
ಶುದ್ಧ ಕುಡಿಯುವ ನೀರಿನ ವ್ಯವಸ್ಥೆ
ಶುದ್ಧ ಕುಡಿಯುವ ನೀರಿನ ಮೂಲಗಳನ್ನು ಶುಚಿಗೊಳಿಸಿ ಹೆಚ್ಚುವರಿ ನಲ್ಲಿಗಳನ್ನೂ ಅಳವಡಿಸಲಾಗುವುದು ಮತ್ತು ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ, ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆಯಾಗದಂತೆ ನಿರಂತರ ವಿದ್ಯುತ್ ಸರಬರಾಜಾಗುವಂತೆ ನೋಡಿಕೊಳ್ಳಬೇಕು. ದೇವಾಲಯದ ವ್ಯಾಪ್ತಿಯ ಬೀದಿ ದೀಪಗಳು ಸರಿಪಡಿಸಿ ಸೂಕ್ತ ಬೆಳಕಿನ ವ್ಯವಸ್ಥೆ ಯಾಗಬೇಕು. ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಿ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ನಿಮಿಷಾಂಬ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಶ್ರೀರಂಗನಾಥಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಆಧಿಕಾರಿ ಉಮಾ, ಮುಜರಾಯಿ ತಹಶೀಲ್ದಾರ್ ತಮ್ಮೇಗೌಡ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…
ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…