ಮಂಡ್ಯ: ನಾಯಕ ಜನಾಂಗದ ರಾಜಕೀಯ ಮುಖಂಡ ಶ್ರೀರಾಮುಲು ಅವರ ವಿರುದ್ಧ ಷಡ್ಯಂತ್ರ ರೂಪಿಸಿ ಕಡೆಗಣಿಸಲಾಗುತ್ತಿದ್ದು, ಬಿಜೆಪಿ ಪಕ್ಷ ಶ್ರೀರಾಮುಲು ಅವರಿಗೆ ಉನ್ನತ ಸ್ಥಾನಮಾನ ನೀಡಬೇಕು ಎಂದು ಶ್ರೀರಾಮುಲು ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ರಜತ್ ಒತ್ತಾಯಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಶ್ರೀರಾಮುಲು ಅವರು ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದರೂ ಬಿಜೆಪಿ ಪಕ್ಷ ಗುರುತಿಸಲಿಲ್ಲ. ಬಿಜೆಪಿ ಅಧಿಕಾರಾವಧಿಯಲ್ಲಿ ಅವರಿಗೆ ಉತ್ತಮವಾದ ಸಚಿವ ಖಾತೆಯನ್ನು ನೀಡಿಲ್ಲ. ಈಗಲಾದರೂ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ ಮಾನ ನೀಡಬೇಕು ಎಂದು ಆಗ್ರಹಿಸಿದರು.
ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಶ್ರೀರಾಮುಲು ಅವರೇ ಕಾರಣ ಎಂದು ಅವರ ವಿರುದ್ಧ ತೇಜೋವಧೆಯ ಮಾತುಗಳನ್ನು ಹೇಳಲಾಗುತ್ತಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ಸತ್ಯಶೋಧನಾ ಸಮಿತಿ ರಚಿಸಿ ನಿಷ್ಪಕ್ಷಪಾತ ತನಿಖೆ ಮಾಡಿಸಿ ವರದಿ ಪಡೆದು ಮಾತನಾಡಬೇಕು ಎಂದು ಸಲಹೆ ನೀಡಿದರು.
ಸಾಕಷ್ಟು ವರ್ಷಗಳಿಂದ ಪಕ್ಷಕ್ಕೆ ದುಡಿದ ಶ್ರೀರಾಮುಲು ಅವರಿಗೆ ಬಿಜೆಪಿ ಪಕ್ಷ ಯಾವುದೇ ಉನ್ನತ ಮಟ್ಟದ ಸ್ಥಾನ ನೀಡಿಲ್ಲವಾಗಿದ್ದು, ಈಗಲಾದರೂ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಶ್ರೀರಂಗಪಟ್ಟಣ ಮಂಜು, ಮಳವಳ್ಳಿ ಮಲ್ಲೇಶ್, ಬಾಲು ಇದ್ದರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…