ಮಂಡ್ಯ

ಶ್ರೀರಾಮುಲುಗೆ ಅಧ್ಯಕ್ಷ ಸ್ಥಾನ ನೀಡುವಂತೆ ಒತ್ತಾಯ

ಮಂಡ್ಯ: ನಾಯಕ ಜನಾಂಗದ ರಾಜಕೀಯ ಮುಖಂಡ ಶ್ರೀರಾಮುಲು ಅವರ ವಿರುದ್ಧ ಷಡ್ಯಂತ್ರ ರೂಪಿಸಿ ಕಡೆಗಣಿಸಲಾಗುತ್ತಿದ್ದು, ಬಿಜೆಪಿ ಪಕ್ಷ ಶ್ರೀರಾಮುಲು ಅವರಿಗೆ ಉನ್ನತ ಸ್ಥಾನಮಾನ ನೀಡಬೇಕು ಎಂದು ಶ್ರೀರಾಮುಲು ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ರಜತ್ ಒತ್ತಾಯಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಶ್ರೀರಾಮುಲು ಅವರು ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದರೂ ಬಿಜೆಪಿ ಪಕ್ಷ ಗುರುತಿಸಲಿಲ್ಲ. ಬಿಜೆಪಿ ಅಧಿಕಾರಾವಧಿಯಲ್ಲಿ ಅವರಿಗೆ ಉತ್ತಮವಾದ ಸಚಿವ ಖಾತೆಯನ್ನು ನೀಡಿಲ್ಲ. ಈಗಲಾದರೂ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ ಮಾನ ನೀಡಬೇಕು ಎಂದು ಆಗ್ರಹಿಸಿದರು.

ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಶ್ರೀರಾಮುಲು ಅವರೇ ಕಾರಣ ಎಂದು ಅವರ ವಿರುದ್ಧ ತೇಜೋವಧೆಯ ಮಾತುಗಳನ್ನು ಹೇಳಲಾಗುತ್ತಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ಸತ್ಯಶೋಧನಾ ಸಮಿತಿ ರಚಿಸಿ ನಿಷ್ಪಕ್ಷಪಾತ ತನಿಖೆ ಮಾಡಿಸಿ ವರದಿ ಪಡೆದು ಮಾತನಾಡಬೇಕು ಎಂದು ಸಲಹೆ ನೀಡಿದರು.

ಸಾಕಷ್ಟು ವರ್ಷಗಳಿಂದ ಪಕ್ಷಕ್ಕೆ ದುಡಿದ ಶ್ರೀರಾಮುಲು ಅವರಿಗೆ ಬಿಜೆಪಿ ಪಕ್ಷ ಯಾವುದೇ ಉನ್ನತ ಮಟ್ಟದ ಸ್ಥಾನ ನೀಡಿಲ್ಲವಾಗಿದ್ದು, ಈಗಲಾದರೂ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಶ್ರೀರಂಗಪಟ್ಟಣ ಮಂಜು, ಮಳವಳ್ಳಿ ಮಲ್ಲೇಶ್, ಬಾಲು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

4 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

4 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

4 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

7 hours ago