ಶ್ರೀರಂಗಪಟ್ಟಣ : ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯ ಪಕ್ಕದಲ್ಲಿ ಎಲ್ಐಸಿ ಶಾಖೆ ಕಚೇರಿ ಕಟ್ಟಡ ನಿರ್ಮಾಣದ ತಳಪಾಯಕ್ಕಾಗಿ ಭೂಮಿ ಅಗೆಯುವ ವೇಳೆ ಒಡೆಯರ್ ಕಾಲಕ್ಕೆ ಸೇರಿದ 10 ಕಲ್ಲಿನ ಗುಂಡುಗಳು ಪತ್ತೆಯಾಗಿವೆ.
ಭಾನುವಾರ ಏಳು ಹಾಗೂ ಸೋಮವಾರ ಮೂರು ಕಲ್ಲಿನ ಗುಂಡುಗಳು ಸಿಕ್ಕಿವೆ. ಕೆನರಾ ಬ್ಯಾಂಕ್ ಶಾಖೆ ಕಟ್ಟಡಕ್ಕೆ ಐದಾರು ಅಡಿ ದೂರದಲ್ಲಿ ಈ ಗುಂಡುಗಳು ಪತ್ತೆಯಾಗಿವೆ. ನೆಲ ಮಟ್ಟದಿಂದ 5 ಅಡಿಗಳಷ್ಟು ಆಳದಲ್ಲಿ ಈ ಗುಂಡುಗಳು ಕಂಡು ಬಂದಿವೆ. ಈ ಗುಂಡುಗಳು ಸಿಕ್ಕಿರುವ ಸ್ಥಳದಲ್ಲಿ ಸುರಕಿ ಗಾರೆ ಮತ್ತು ಮಣ್ಣಿನ ಸುಟ್ಟ ಇಟ್ಟಿಗೆಗಳ ಗೋಡೆಯಂತಹ ರಚನೆ ಕೂಡ ಕಾಣಿಸಿದೆ. ಒಂದೆಡೆ ಕಾಡುಗಲ್ಲಿನ ವರಸೆಯೂ ಗೋಚರಿಸಿದೆ. ಎಲ್ಐಸಿ ಕಚೇರಿ ಕಟ್ಟಡ ನಿರ್ಮಾಣ ಉದ್ದೇಶಕ್ಕೆ 15ಕ್ಕೂ ಹೆಚ್ಚು ಗುಂಡಿಗಳನ್ನು ತೆಗೆದಿದ್ದು, ಈ ಪೈಕಿ ಮೂರು ಗುಂಡಿಗಳಲ್ಲಿ ಪ್ರಾಚೀನ ಕಟ್ಟಡದ ಕುರುಹುಗಳು ಕಂಡು ಬಂದಿವೆ.
ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಕ್ಯೂರೇಟರ್ ಸುನಿಲ್, ಸಹಾಯಕ ಇಂಜಿನಿಯರ್ ಕೆ. ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಪ್ರಾಚೀನ ಅವಶೇಷಗಳು ಮತ್ತೆ ಸಿಕ್ಕಿದರೆ ತಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಬೇಕು. ಐತಿಹಾಸಿಕ ಕುರುಹುಗಳನ್ನು ನಾಶಪಡಿಸಬಾರದು ಎಂದು ಎಲ್ಐಸಿ ಅಧಿಕಾರಿಗಳಿಗೆ ಸೂಚಿಸಿದರು.
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…