ಶ್ರೀರಂಗಪಟ್ಟಣ : ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯ ಪಕ್ಕದಲ್ಲಿ ಎಲ್ಐಸಿ ಶಾಖೆ ಕಚೇರಿ ಕಟ್ಟಡ ನಿರ್ಮಾಣದ ತಳಪಾಯಕ್ಕಾಗಿ ಭೂಮಿ ಅಗೆಯುವ ವೇಳೆ ಒಡೆಯರ್ ಕಾಲಕ್ಕೆ ಸೇರಿದ 10 ಕಲ್ಲಿನ ಗುಂಡುಗಳು ಪತ್ತೆಯಾಗಿವೆ.
ಭಾನುವಾರ ಏಳು ಹಾಗೂ ಸೋಮವಾರ ಮೂರು ಕಲ್ಲಿನ ಗುಂಡುಗಳು ಸಿಕ್ಕಿವೆ. ಕೆನರಾ ಬ್ಯಾಂಕ್ ಶಾಖೆ ಕಟ್ಟಡಕ್ಕೆ ಐದಾರು ಅಡಿ ದೂರದಲ್ಲಿ ಈ ಗುಂಡುಗಳು ಪತ್ತೆಯಾಗಿವೆ. ನೆಲ ಮಟ್ಟದಿಂದ 5 ಅಡಿಗಳಷ್ಟು ಆಳದಲ್ಲಿ ಈ ಗುಂಡುಗಳು ಕಂಡು ಬಂದಿವೆ. ಈ ಗುಂಡುಗಳು ಸಿಕ್ಕಿರುವ ಸ್ಥಳದಲ್ಲಿ ಸುರಕಿ ಗಾರೆ ಮತ್ತು ಮಣ್ಣಿನ ಸುಟ್ಟ ಇಟ್ಟಿಗೆಗಳ ಗೋಡೆಯಂತಹ ರಚನೆ ಕೂಡ ಕಾಣಿಸಿದೆ. ಒಂದೆಡೆ ಕಾಡುಗಲ್ಲಿನ ವರಸೆಯೂ ಗೋಚರಿಸಿದೆ. ಎಲ್ಐಸಿ ಕಚೇರಿ ಕಟ್ಟಡ ನಿರ್ಮಾಣ ಉದ್ದೇಶಕ್ಕೆ 15ಕ್ಕೂ ಹೆಚ್ಚು ಗುಂಡಿಗಳನ್ನು ತೆಗೆದಿದ್ದು, ಈ ಪೈಕಿ ಮೂರು ಗುಂಡಿಗಳಲ್ಲಿ ಪ್ರಾಚೀನ ಕಟ್ಟಡದ ಕುರುಹುಗಳು ಕಂಡು ಬಂದಿವೆ.
ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಕ್ಯೂರೇಟರ್ ಸುನಿಲ್, ಸಹಾಯಕ ಇಂಜಿನಿಯರ್ ಕೆ. ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಪ್ರಾಚೀನ ಅವಶೇಷಗಳು ಮತ್ತೆ ಸಿಕ್ಕಿದರೆ ತಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಬೇಕು. ಐತಿಹಾಸಿಕ ಕುರುಹುಗಳನ್ನು ನಾಶಪಡಿಸಬಾರದು ಎಂದು ಎಲ್ಐಸಿ ಅಧಿಕಾರಿಗಳಿಗೆ ಸೂಚಿಸಿದರು.
ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…
ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.10ರಂದು ಸಂಜೆ ಬೆಂಗಳೂರಿನ…
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು…
ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಂ ರಚನೆ ಮಾಡಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚನೆ…
ಬೆಂಗಳೂರು: ಆರ್ಎಸ್ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್…