ಮಂಡ್ಯ

ಶ್ರೀರಂಗಪಟ್ಟಣ | ಒಡೆಯರ್‌ ಕಾಲದ 10 ಕಲ್ಲಿನ ಗುಂಡುಗಳು ಪತ್ತೆ

ಶ್ರೀರಂಗಪಟ್ಟಣ : ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯ ಪಕ್ಕದಲ್ಲಿ ಎಲ್‌ಐಸಿ ಶಾಖೆ ಕಚೇರಿ ಕಟ್ಟಡ ನಿರ್ಮಾಣದ ತಳಪಾಯಕ್ಕಾಗಿ ಭೂಮಿ ಅಗೆಯುವ ವೇಳೆ ಒಡೆಯರ್ ಕಾಲಕ್ಕೆ ಸೇರಿದ 10 ಕಲ್ಲಿನ ಗುಂಡುಗಳು ಪತ್ತೆಯಾಗಿವೆ.

ಭಾನುವಾರ ಏಳು ಹಾಗೂ ಸೋಮವಾರ ಮೂರು ಕಲ್ಲಿನ ಗುಂಡುಗಳು ಸಿಕ್ಕಿವೆ. ಕೆನರಾ ಬ್ಯಾಂಕ್ ಶಾಖೆ ಕಟ್ಟಡಕ್ಕೆ ಐದಾರು ಅಡಿ ದೂರದಲ್ಲಿ ಈ ಗುಂಡುಗಳು ಪತ್ತೆಯಾಗಿವೆ. ನೆಲ ಮಟ್ಟದಿಂದ 5 ಅಡಿಗಳಷ್ಟು ಆಳದಲ್ಲಿ ಈ ಗುಂಡುಗಳು ಕಂಡು ಬಂದಿವೆ. ಈ ಗುಂಡುಗಳು ಸಿಕ್ಕಿರುವ ಸ್ಥಳದಲ್ಲಿ ಸುರಕಿ ಗಾರೆ ಮತ್ತು ಮಣ್ಣಿನ ಸುಟ್ಟ ಇಟ್ಟಿಗೆಗಳ ಗೋಡೆಯಂತಹ ರಚನೆ ಕೂಡ ಕಾಣಿಸಿದೆ. ಒಂದೆಡೆ ಕಾಡುಗಲ್ಲಿನ ವರಸೆಯೂ ಗೋಚರಿಸಿದೆ. ಎಲ್‌ಐಸಿ ಕಚೇರಿ ಕಟ್ಟಡ ನಿರ್ಮಾಣ ಉದ್ದೇಶಕ್ಕೆ 15ಕ್ಕೂ ಹೆಚ್ಚು ಗುಂಡಿಗಳನ್ನು ತೆಗೆದಿದ್ದು, ಈ ಪೈಕಿ ಮೂರು ಗುಂಡಿಗಳಲ್ಲಿ ಪ್ರಾಚೀನ ಕಟ್ಟಡದ ಕುರುಹುಗಳು ಕಂಡು ಬಂದಿವೆ.

ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಕ್ಯೂರೇಟರ್ ಸುನಿಲ್, ಸಹಾಯಕ ಇಂಜಿನಿಯರ್ ಕೆ. ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಪ್ರಾಚೀನ ಅವಶೇಷಗಳು ಮತ್ತೆ ಸಿಕ್ಕಿದರೆ ತಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಬೇಕು. ಐತಿಹಾಸಿಕ ಕುರುಹುಗಳನ್ನು ನಾಶಪಡಿಸಬಾರದು ಎಂದು ಎಲ್‌ಐಸಿ ಅಧಿಕಾರಿಗಳಿಗೆ ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

12 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

16 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

21 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

26 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

34 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago