ಶ್ರೀರಂಗಪಟ್ಟಣ : ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯ ಪಕ್ಕದಲ್ಲಿ ಎಲ್ಐಸಿ ಶಾಖೆ ಕಚೇರಿ ಕಟ್ಟಡ ನಿರ್ಮಾಣದ ತಳಪಾಯಕ್ಕಾಗಿ ಭೂಮಿ ಅಗೆಯುವ ವೇಳೆ ಒಡೆಯರ್ ಕಾಲಕ್ಕೆ ಸೇರಿದ 10 ಕಲ್ಲಿನ ಗುಂಡುಗಳು ಪತ್ತೆಯಾಗಿವೆ.
ಭಾನುವಾರ ಏಳು ಹಾಗೂ ಸೋಮವಾರ ಮೂರು ಕಲ್ಲಿನ ಗುಂಡುಗಳು ಸಿಕ್ಕಿವೆ. ಕೆನರಾ ಬ್ಯಾಂಕ್ ಶಾಖೆ ಕಟ್ಟಡಕ್ಕೆ ಐದಾರು ಅಡಿ ದೂರದಲ್ಲಿ ಈ ಗುಂಡುಗಳು ಪತ್ತೆಯಾಗಿವೆ. ನೆಲ ಮಟ್ಟದಿಂದ 5 ಅಡಿಗಳಷ್ಟು ಆಳದಲ್ಲಿ ಈ ಗುಂಡುಗಳು ಕಂಡು ಬಂದಿವೆ. ಈ ಗುಂಡುಗಳು ಸಿಕ್ಕಿರುವ ಸ್ಥಳದಲ್ಲಿ ಸುರಕಿ ಗಾರೆ ಮತ್ತು ಮಣ್ಣಿನ ಸುಟ್ಟ ಇಟ್ಟಿಗೆಗಳ ಗೋಡೆಯಂತಹ ರಚನೆ ಕೂಡ ಕಾಣಿಸಿದೆ. ಒಂದೆಡೆ ಕಾಡುಗಲ್ಲಿನ ವರಸೆಯೂ ಗೋಚರಿಸಿದೆ. ಎಲ್ಐಸಿ ಕಚೇರಿ ಕಟ್ಟಡ ನಿರ್ಮಾಣ ಉದ್ದೇಶಕ್ಕೆ 15ಕ್ಕೂ ಹೆಚ್ಚು ಗುಂಡಿಗಳನ್ನು ತೆಗೆದಿದ್ದು, ಈ ಪೈಕಿ ಮೂರು ಗುಂಡಿಗಳಲ್ಲಿ ಪ್ರಾಚೀನ ಕಟ್ಟಡದ ಕುರುಹುಗಳು ಕಂಡು ಬಂದಿವೆ.
ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಕ್ಯೂರೇಟರ್ ಸುನಿಲ್, ಸಹಾಯಕ ಇಂಜಿನಿಯರ್ ಕೆ. ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಪ್ರಾಚೀನ ಅವಶೇಷಗಳು ಮತ್ತೆ ಸಿಕ್ಕಿದರೆ ತಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಬೇಕು. ಐತಿಹಾಸಿಕ ಕುರುಹುಗಳನ್ನು ನಾಶಪಡಿಸಬಾರದು ಎಂದು ಎಲ್ಐಸಿ ಅಧಿಕಾರಿಗಳಿಗೆ ಸೂಚಿಸಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…