ಶ್ರೀರಂಗಪಟ್ಟಣ : ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯ ಪಕ್ಕದಲ್ಲಿ ಎಲ್ಐಸಿ ಶಾಖೆ ಕಚೇರಿ ಕಟ್ಟಡ ನಿರ್ಮಾಣದ ತಳಪಾಯಕ್ಕಾಗಿ ಭೂಮಿ ಅಗೆಯುವ ವೇಳೆ ಒಡೆಯರ್ ಕಾಲಕ್ಕೆ ಸೇರಿದ 10 ಕಲ್ಲಿನ ಗುಂಡುಗಳು ಪತ್ತೆಯಾಗಿವೆ.
ಭಾನುವಾರ ಏಳು ಹಾಗೂ ಸೋಮವಾರ ಮೂರು ಕಲ್ಲಿನ ಗುಂಡುಗಳು ಸಿಕ್ಕಿವೆ. ಕೆನರಾ ಬ್ಯಾಂಕ್ ಶಾಖೆ ಕಟ್ಟಡಕ್ಕೆ ಐದಾರು ಅಡಿ ದೂರದಲ್ಲಿ ಈ ಗುಂಡುಗಳು ಪತ್ತೆಯಾಗಿವೆ. ನೆಲ ಮಟ್ಟದಿಂದ 5 ಅಡಿಗಳಷ್ಟು ಆಳದಲ್ಲಿ ಈ ಗುಂಡುಗಳು ಕಂಡು ಬಂದಿವೆ. ಈ ಗುಂಡುಗಳು ಸಿಕ್ಕಿರುವ ಸ್ಥಳದಲ್ಲಿ ಸುರಕಿ ಗಾರೆ ಮತ್ತು ಮಣ್ಣಿನ ಸುಟ್ಟ ಇಟ್ಟಿಗೆಗಳ ಗೋಡೆಯಂತಹ ರಚನೆ ಕೂಡ ಕಾಣಿಸಿದೆ. ಒಂದೆಡೆ ಕಾಡುಗಲ್ಲಿನ ವರಸೆಯೂ ಗೋಚರಿಸಿದೆ. ಎಲ್ಐಸಿ ಕಚೇರಿ ಕಟ್ಟಡ ನಿರ್ಮಾಣ ಉದ್ದೇಶಕ್ಕೆ 15ಕ್ಕೂ ಹೆಚ್ಚು ಗುಂಡಿಗಳನ್ನು ತೆಗೆದಿದ್ದು, ಈ ಪೈಕಿ ಮೂರು ಗುಂಡಿಗಳಲ್ಲಿ ಪ್ರಾಚೀನ ಕಟ್ಟಡದ ಕುರುಹುಗಳು ಕಂಡು ಬಂದಿವೆ.
ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಕ್ಯೂರೇಟರ್ ಸುನಿಲ್, ಸಹಾಯಕ ಇಂಜಿನಿಯರ್ ಕೆ. ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಪ್ರಾಚೀನ ಅವಶೇಷಗಳು ಮತ್ತೆ ಸಿಕ್ಕಿದರೆ ತಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಬೇಕು. ಐತಿಹಾಸಿಕ ಕುರುಹುಗಳನ್ನು ನಾಶಪಡಿಸಬಾರದು ಎಂದು ಎಲ್ಐಸಿ ಅಧಿಕಾರಿಗಳಿಗೆ ಸೂಚಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…