shriranga pattana dasara
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ದಸರಾ 2025 ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಂಬೂಸವಾರಿ ಮೆರವಣಿಗೆಗೆ ಚಲನಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ ಚಾಲನೆ ನೀಡಿದರು.
415ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ ಮಂಗಳಾರತಿ ಬಳಿಕ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಚಾಲನೆ ಕೊಟ್ಟರು.
ಇದನ್ನು ಓದಿ : ಇಂದಿನಿಂದ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಮಹೋತ್ಸವ
ದಸರಾ ಆನೆ ಮಹೇಂದ್ರನ ಮೇಲೆ ಮರದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡದೇವಿಗೆ ಪುಷ್ಪಾರ್ಚನೆ ಮಾಡಲಾಯಿತು. ಮರದ ಅಂಬಾರಿ ಹೊತ್ತ ಮಹೇಂದ್ರ ಆನೆ ಜೊತೆಗೆ ಕುಮ್ಕಿ ಆನೆಗಳಾದ ಕಾವೇರಿ, ಲಕ್ಷ್ಮೀ ಹೆಜ್ಜೆ ಹಾಕಿದವು.
ವಿವಿಧ ಕಲಾತಂಡಗಳಾದ ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ದ ಚಿತ್ರಗಳ ಮೆರವಣಿಗೆ ಗಮನ ಸೆಳೆಯಿತು.
ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿ ಹಲವರು ಭಾಗಿಯಾಗಿದ್ದರು. ಶ್ರೀರಂಗನಾಥಸ್ವಾಮಿ ದೇವಾಲಯ ಬಳಿಯ ವೇದಿಕೆಯಲ್ಲಿ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಚಾಲನೆ ಸಿಗಲಿದೆ.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…