shriranga pattana dasara
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ದಸರಾ 2025 ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಂಬೂಸವಾರಿ ಮೆರವಣಿಗೆಗೆ ಚಲನಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ ಚಾಲನೆ ನೀಡಿದರು.
415ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ ಮಂಗಳಾರತಿ ಬಳಿಕ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಚಾಲನೆ ಕೊಟ್ಟರು.
ಇದನ್ನು ಓದಿ : ಇಂದಿನಿಂದ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಮಹೋತ್ಸವ
ದಸರಾ ಆನೆ ಮಹೇಂದ್ರನ ಮೇಲೆ ಮರದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡದೇವಿಗೆ ಪುಷ್ಪಾರ್ಚನೆ ಮಾಡಲಾಯಿತು. ಮರದ ಅಂಬಾರಿ ಹೊತ್ತ ಮಹೇಂದ್ರ ಆನೆ ಜೊತೆಗೆ ಕುಮ್ಕಿ ಆನೆಗಳಾದ ಕಾವೇರಿ, ಲಕ್ಷ್ಮೀ ಹೆಜ್ಜೆ ಹಾಕಿದವು.
ವಿವಿಧ ಕಲಾತಂಡಗಳಾದ ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ದ ಚಿತ್ರಗಳ ಮೆರವಣಿಗೆ ಗಮನ ಸೆಳೆಯಿತು.
ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿ ಹಲವರು ಭಾಗಿಯಾಗಿದ್ದರು. ಶ್ರೀರಂಗನಾಥಸ್ವಾಮಿ ದೇವಾಲಯ ಬಳಿಯ ವೇದಿಕೆಯಲ್ಲಿ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಚಾಲನೆ ಸಿಗಲಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…