ಮಂಡ್ಯ: ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಶೇಕ್ ತನ್ವೀರ್ ಆಸಿಫ್ ಮಂಗಳವಾರ(ಆ.3) ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ದಸರಾ ಹಬ್ಬದ ಪೂರ್ವ ತಯಾರಿ ಬಗ್ಗೆ ಪರಿವೀಕ್ಷಣೆ ನಡೆಸಿದರು.
ಅಕ್ಟೋಬರ್ ಮಾಹೆಯಲ್ಲಿ ಶ್ರೀರಂಗಪಟ್ಟಣ ದಸರಾ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದಸರಾ ಉದ್ಘಾಟನೆಯಾಗಲಿರುವ ಬನ್ನಿಮಂಟಪ ಆವರಣದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಿ. ಅಲ್ಲದೆ ಐತಿಹಾಸಿಕ ಕೊಳಕ್ಕೆ ಸುಣ್ಣಬಣ್ಣ ಮಾಡಿಸುವುದು ಮಂಟಪದ ಮುಂದಿನ ಭಾಗದಲ್ಲಿ ಗೇಟ್ ಹಾಗೂ ಬೇಲಿಯನ್ನು ಅಳವಡಿಸುವುದು ಹಾಗೂ ನೀರಿನ ವ್ಯವಸ್ಥೆ ಮಾಡಲು ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಟಿ.ಎ.ಪ್ರಶಾಂತ್ ಬಾಬು ರವರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಎ.ಬಿ ವೇಣು ಹಾಗೂ ಸಹಾಯಕ ನಿರ್ದೇಶಕರಾದ ಮೃತ್ಯುಂಜಯ ಹಾಜರಿದ್ದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…