ಮಂಡ್ಯ: ತಾಲೂಕಿನ ಶ್ರೀರಂಗಪಟ್ಟಣದ ಪ್ರವಾಹ ಪೀಡಿತ ವೆಲ್ಲಿಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಶನಿವಾರ(ಜು.27) ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಚಿವರು, ಕಳೆದ ಬಾರಿಯ ನೆರೆಯ ಪ್ರವಾಹಕ್ಕೆ ಹೋಲಿಸಿದರೆ ಈ ಬಾರಿಯ ಅನಾಹುತ ಕಡಿಮೆ ಇದೆ. ಸಂಬಂಧಪಟ್ಟ ಅಧಿಕಾರಿಗಳು ಇದುವರೆಗಿನ ಬೆಳೆ ನಷ್ಟದ ಬಗ್ಗೆ ಸೂಕ್ತ ವರದಿ ನೀಡಲಿದ್ದಾರೆ. ಸೂಕ್ತ ರೀತಿಯಲ್ಲಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಕೆಲವು ರೈತರು ನದಿಯ ಜಾಗವನ್ನು ಒತ್ತುವರಿ ಮಾಡಿಕೊಂಡು ಕೃಷಿ ಚಟುವಟಿಕೆ ಮಾಡುತ್ತಿದ್ದಾರೆ. ಆ ಜಮೀನಿಗು ಪರಿಹಾರ ನೀಡಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಸಚಿವರು, ನದಿಯ ಬದಿಗಳಲ್ಲಿ ಹಾಗೂ ಜಲಾಶಯದ ಹಿನ್ನೀರು ಬದಿಯಲ್ಲಿ ನೆರೆ ಇಲ್ಲದ ಸಂದರ್ಭದಲ್ಲಿ ರೈತರು ಬೆಳೆಯನ್ನು ಬೆಳೆಯುವುದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಸರಿಯುವುದು ವಾಡಿಕೆಯಾಗಿದೆ. ಇದು ಕಾನೂನಾತ್ಮಕವಾಗಿ ತಪ್ಪು ನೆರೆ ಬಂದ ಸಂದರ್ಭದಲ್ಲಿ ಪ್ರಾಣ ಹಾನಿಯಾಗಬಹುದು ಹಾಗೂ ಇಲ್ಲಿ ಬೆಳೆಯುವ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಒದಗಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…