ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮೈಸೂರಿನ ರೌಡಿ ಶೀಟರ್ ಸಾಹಿಲ್ ಆಲಿಯಾಸ್ ಚುವ್ವಾ ಕೊಲೆಯಾದ ವ್ಯಕ್ತಿ. ಈತನನ್ನ ಸಹಚರರೇ ಬರ್ಬರ ಹತ್ಯೆ ಮಾಡಿ, ರಸ್ತೆ ಬದಿಯ ಪೊದೆಯೊಂದರಲ್ಲಿ ಕೊಚ್ಚಿ ಕೊಲೆಗೈದು ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈತ ಮೈಸೂರು,ಮಂಡ್ಯಕಡೆಗಳಲ್ಲಿ ರಾತ್ರಿ ವೇಳೆ ಓಡಾಡಿಕೊಂಡಿದ್ದ. ಮೈಸೂರು ನಗರದ ಉದಯಗಿರಿ, ಎನ್.ಆರ್,ಮೊಹಲ್ಲ ಮಂಡಿ ಮೊಹಲ್ಲ, ವಿ.ವಿ ಪುರಂ,ಹಾಗೂ ತುಮಕೂರು ಪೊಲೀಸ್ ಠಾಣೆಗಳಲ್ಲಿ 15 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈತ ಬೇಕಾಗಿದ್ದ ಅರೋಪಿ. ಕಳೆದ 4-5 ವರ್ಷಗಳಿಂದ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಕಿರಾತಕ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಎಸ್ಪಿ ಶೋಭಾರಾಣಿ, ಎಎಸ್ ಪಿ ಸಿಇ ತಿಮ್ಮಯ್ಯ, ಟೌನ್ ಮತ್ತು ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣ ಪ್ರಕರಣ ದಾಖಲಾಗಿದೆ.




