ಮಂಡ್ಯ

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೈಸೂರಿನ ರೌಡಿ ಶೀಟರ್ ಸಾಹಿಲ್ ಆಲಿಯಾಸ್ ಚುವ್ವಾ ಕೊಲೆಯಾದ ವ್ಯಕ್ತಿ. ಈತನನ್ನ ಸಹಚರರೇ ಬರ್ಬರ ಹತ್ಯೆ ಮಾಡಿ, ರಸ್ತೆ ಬದಿಯ ಪೊದೆಯೊಂದರಲ್ಲಿ ಕೊಚ್ಚಿ ಕೊಲೆಗೈದು ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಈತ ಮೈಸೂರು,ಮಂಡ್ಯಕಡೆಗಳಲ್ಲಿ ರಾತ್ರಿ ವೇಳೆ ಓಡಾಡಿಕೊಂಡಿದ್ದ. ಮೈಸೂರು ನಗರದ ಉದಯಗಿರಿ, ಎನ್.ಆರ್,ಮೊಹಲ್ಲ ಮಂಡಿ ಮೊಹಲ್ಲ, ವಿ.ವಿ ಪುರಂ,ಹಾಗೂ ತುಮಕೂರು ಪೊಲೀಸ್ ಠಾಣೆಗಳಲ್ಲಿ 15 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈತ ಬೇಕಾಗಿದ್ದ ಅರೋಪಿ. ಕಳೆದ 4-5 ವರ್ಷಗಳಿಂದ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಕಿರಾತಕ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಎಸ್ಪಿ ಶೋಭಾರಾಣಿ, ಎಎಸ್ ಪಿ ಸಿಇ ತಿಮ್ಮಯ್ಯ, ಟೌನ್ ಮತ್ತು ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

6 mins ago

ಕಣ್ಣಿಲ್ಲದ ತಮ್ಮ, ದಿಕ್ಕಿಲ್ಲದ ಅಕ್ಕ

ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು,…

12 mins ago

ಯರಿಯೂರಿನ ಸೋಬಾನೆ ಮಾಳಗರಸಮ್ಮ ಮತ್ತು ಸೋದರಿಯರು

ಪ್ರಕಾಶ್ ಪುಟ್ಟಪ್ಪ ಸುತ್ತಮುತ್ತ ಹಳ್ಳಿಗಳಿಗೆಲ್ಲ ಸೋಬಾನೆ ಮಾಳಗರಸಮ್ಮ ಎಂದೇ ಪ್ರಖ್ಯಾತಿ ಗಳಿಸಿರೋ ಈ ಹಿರಿ ತಾಯಿಯ ವೈಯಕ್ತಿಕ ಬದುಕು ನಿಜಕ್ಕೂ…

16 mins ago

2026ರ ಮೈಸೂರು ದಸರಾಗೆ ಡಿಜಿಟಲ್ ಸ್ಪರ್ಶ!

ಕೆ.ಎಸ್.ಚಂದ್ರಶೇಖರ್‌ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…

21 mins ago

ಮಡಿಕೇರಿ ದಸರಾ ಶೋಭಾಯಾತ್ರೆ ದಿನಾಂಕ ಗೊಂದಲ

ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…

26 mins ago