ಮಂಡ್ಯ

ಶ್ರೀರಂಗಪಟ್ಟಣ | ಎಚ್‌ಐವಿ,ಏಡ್ಸ್‌ ಜಾಗೃತಿಗೆ ರೆಡ್‌ ರನ್‌ ಮ್ಯಾರಥಾನ್‌

ಶ್ರೀರಂಗಪಟ್ಟಣ : ಯುವ ಜನತೆ ಎಚ್‌ಐವಿ, ಏಡ್ಸ್‌ನಂತಹ ಮಾರಕ ಕಾಯಿಲೆಗೆ ತುತ್ತಾಗದೇ ಸುಸ್ಥಿರ ಜೀವನ ರೂಪಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಹಾಗಾಗಿ ಯುವಕರು ತಾವು ಜಾಗೃತರಾಗಿ ಇತರರಿಗೂ ಎಚ್‌ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಅಧಿಕಾರಿ ಡಾ.ಎಂ.ಎನ್.ಆಶಾಲತಾ ಸಲಹೆ ನೀಡಿದರು.

ಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ತೀವ್ರಗೊಳಿಸಿದ ಐಇಸಿ ಪ್ರಚಾರ ಆಂದೋಲನದ-೨೦೨೫ರ ಅಂಗವಾಗಿ ಏರ್ಪಡಿಸಿದ್ದ ರೆಡ್‌ರನ್ ಮ್ಯಾರಥಾನ್ ಸ್ಪರ್ಧ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಜನರು ಹಾಗೂ ಎಲ್ಲಾ ವಯೋಮಾನದವರಿಗೆ ಎಚ್‌ಐವಿ, ಏಡ್ಸ್ ಕುರಿತು ರೆಡ್ ರನ್ ಮ್ಯಾರಥಾನ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:-ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ

ಮ್ಯಾರಥಾನ್ ಸ್ಪರ್ಧೆಗೆ ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಚೇತನಯಾದವ್, ಟಿಎಚ್‌ಒ ಡಾ. ಗಣೇಶ್‌ಪ್ರಸಾದ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ಜಿಲ್ಲಾ ಮೇಲ್ವಿಚಾರಕ ವಿನಾಯಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ, ಅಚೀವರ್ಸ್ ಅಕಾಡೆಮಿ ಅಧ್ಯಕ್ಷ ರಾಘವೇಂದ್ರ, ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ರಾಜು, ಹೇಮಣ್ಣ, ಕೃಷ್ಣೇಗೌಡ, ಫಣೀಂದ್ರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago