marathon
ಶ್ರೀರಂಗಪಟ್ಟಣ : ಯುವ ಜನತೆ ಎಚ್ಐವಿ, ಏಡ್ಸ್ನಂತಹ ಮಾರಕ ಕಾಯಿಲೆಗೆ ತುತ್ತಾಗದೇ ಸುಸ್ಥಿರ ಜೀವನ ರೂಪಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಹಾಗಾಗಿ ಯುವಕರು ತಾವು ಜಾಗೃತರಾಗಿ ಇತರರಿಗೂ ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಅಧಿಕಾರಿ ಡಾ.ಎಂ.ಎನ್.ಆಶಾಲತಾ ಸಲಹೆ ನೀಡಿದರು.
ಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ತೀವ್ರಗೊಳಿಸಿದ ಐಇಸಿ ಪ್ರಚಾರ ಆಂದೋಲನದ-೨೦೨೫ರ ಅಂಗವಾಗಿ ಏರ್ಪಡಿಸಿದ್ದ ರೆಡ್ರನ್ ಮ್ಯಾರಥಾನ್ ಸ್ಪರ್ಧ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಜನರು ಹಾಗೂ ಎಲ್ಲಾ ವಯೋಮಾನದವರಿಗೆ ಎಚ್ಐವಿ, ಏಡ್ಸ್ ಕುರಿತು ರೆಡ್ ರನ್ ಮ್ಯಾರಥಾನ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಇದನ್ನೂ ಓದಿ:-ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ
ಮ್ಯಾರಥಾನ್ ಸ್ಪರ್ಧೆಗೆ ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಚೇತನಯಾದವ್, ಟಿಎಚ್ಒ ಡಾ. ಗಣೇಶ್ಪ್ರಸಾದ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ಜಿಲ್ಲಾ ಮೇಲ್ವಿಚಾರಕ ವಿನಾಯಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ, ಅಚೀವರ್ಸ್ ಅಕಾಡೆಮಿ ಅಧ್ಯಕ್ಷ ರಾಘವೇಂದ್ರ, ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ರಾಜು, ಹೇಮಣ್ಣ, ಕೃಷ್ಣೇಗೌಡ, ಫಣೀಂದ್ರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…