ಮಂಡ್ಯ

ಶ್ರೀರಂಗಪಟ್ಟಣ: ಕಾವೇರಿ ನದಿ ತೀರ ಸ್ವಚ್ಛತೆಗಾಗಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ

ಮಂಡ್ಯ:  ಕಾವೇರಿ ನದಿ ತೀರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ನಡೆಸಿ ನದಿ ನೀರನ್ನು ಮಲೀನ ಗೊಳಿಸಲಾಗುತ್ತಿದೆ. ಕೂಡಲೇ ಸ್ವಚ್ಚತೆ ಕಾಪಾಡುವಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪಟ್ಟಣದ ಪುರಸಭೆ ಕಚೇರಿಗೆ ಹಿಂದೂ ಜಾಗರಣಾ ವೇದಿಕೆ ಸಂಚಾಲಕ ಚಂದನ್ ನೇತೃತ್ವದಲ್ಲಿ ಕಾರ್ಯಕರ್ತರು ಭೇಟಿ ನೀಡಿ, ಮುಖ್ಯಾಧಿಕಾರಿ ಎಂ.ರಾಜಣ್ಣ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಪುರಸಭಾ ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜಿಸಿ, ನದಿ ನೀರು ಮಲಿನದ ಜೊತೆ ತ್ಯಾಜ್ಯ ವಸ್ತುಗಳ ನದಿಯಲ್ಲಿ ಬಿಟ್ಟು ಮಲಿನಗೊಳ್ಳುತ್ತಿದೆ. ಕಾವೇರಿ ನದಿ ತೀರದ ಜಮೀನುಗಳಲ್ಲಿ ಅಕ್ರಮವಾಗಿ ಅಸ್ಥಿ ಪೂಜಾ ಶೆಡ್‌ಗಳ ನಿರ್ಮಿಸಿ ಧಾರ್ಮಿಕ ಕಾರ್ಯಕ್ಕೆ ಬಂದವರಿಂದ ವಸೂಲಾತಿ ನಡೆಯುತ್ತಿದೆ. ಕೂಡಲೇ ಅವುಗಳ ತೆರವು ಮಾಡಿ ಧಾರ್ಮಿಕ ಕಾರ್ಯಕ್ಕೆ ಬರುವರಿಗೆ ಅನುಕೂಲಗಳ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಬಳಿಕ ಮುಖ್ಯಾಧಿಕಾರಿ ಎಂ. ರಾಜಣ್ಣ ಮಾತನಾಡಿ, ಕಾವೇರಿ ನದಿಗೆ ಅನುಪಯುಕ್ತ ವಸ್ತುಗಳು ಸೇರಿದಂತೆ ಅಸ್ಥಿ ವಿರ್ಜನೆ ಜೊತೆ ತ್ಯಾಜ್ಯಗಳ ಬಿಟ್ಟು ನದಿ ನೀರು ಮಲೀನ ಕುರಿತು ಅದರ ಸಂರಕ್ಷಣೆಗೆ ವಿಷಯವಾಗಿ ಹೈಕೋರ್ಟ್‌ನಲ್ಲಿ ಕುಶಾಲ್ ಕುಮಾರ್ ಕೌಶಿಕ್ ಮತ್ತಿತರರು ರಿಟ್ ಅರ್ಜಿ ಸಲ್ಲಿದ್ದಾರೆ.

ಹೈಕೋರ್ಟ್ ಆದೇಶದಂತೆ ಮಂಡ್ಯ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಮಾರ್ಗದರ್ಶನದಲ್ಲಿ ತಹಶಿಲ್ದಾರ್, ಪುರಸಭೆ ಅಧ್ಯಕ್ಷರು, ಸದಸ್ಯರ ಸಭೆ ಸಹ ನಡೆಸಲಾಗಿದೆ.

ಯಾವುದೇ ಸಮಸ್ಯೆಗಳು ಬಾರದಂತೆ ಬರುವ ಪ್ರವಾಸಿಗರು ಧಾರ್ಮಿಕ ಕಾರ್ಯ ನಡೆಸುವರಿಗೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಡಿಪಿಆರ್ ಸಿದ್ದತೆ ಮಾಡಿ ಸರ್ಕಾರದ ಗಮನಕ್ಕೆ ತಂದ ನಂತರ ಕಾರ್ಯರೂಪಗೊಳಿಸಲಾಗುತ್ತದೆ ಎಂದರು.

ಈ ವೇಳೆ ವೇದಿಕೆ ಸದಸ್ಯರಾದ ಲಕ್ಷ್ಮಿನಾರಾಯಣ, ರಾಘು, ಚೇತನ್ ಸೇರಿದಂತೆ ಇತರರು ಮನವಿ ಸಲ್ಲಿಸಿದರು.

ಆಂದೋಲನ ಡೆಸ್ಕ್

Recent Posts

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ವಿಧಿವಶ

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…

7 hours ago

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

17 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

1 day ago