ಮಂಡ್ಯ: ಕೆಆರ್ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದೆ.
ಕೆಆರ್ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಜೀವನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ ಜಲಾವೃತವಾಗಿವೆ.
ಇನ್ನೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ರಾಮಕೃಷ್ಣ ವಿವೇಕಾನಂದ ಆಶ್ರಮದ ಸುತ್ತ ಮುತ್ತಲೂ ಕಾವೇರಿ ನದಿ ನೀರು ಆವರಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಕಾವೇರಿ ನದಿ ತನ್ನ ಉದ್ದಗಲಕ್ಕೂ ಒಂದಲ್ಲಾ ಒಂದು ಸಮಸ್ಯೆ ತಂದಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…