ಮಂಡ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಅನುತ್ತೀರ್ಣರಾದ ಮಕ್ಕಳನ್ನು ಶಾಲೆಗೆ ಸೇರಿಸಿ : ಜಿಲ್ಲಾಧಿಕಾರಿ

ಮಂಡ್ಯ : ಎಸ್. ಎಸ್. ಎಲ್. ಸಿ ಪರೀಕ್ಷೆ-03 ಜುಲೈ ಮಾಹೆಯಲ್ಲಿ ನಡೆಯಲಿದೆ. ಸದರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಪುನ: 10 ನೇ ತರಗತಿಗೆ ನೊಂದಾಯಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾ ಪಂಚಾಯತ್ ಸಭಾಗಂಣದಲ್ಲಿ ಆಯೋಜಿಸಲಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆ -03 ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜುಲೈ 5 ರಿಂದ ಜುಲೈ 12 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ -03 ನಡೆಯಲಿದ್ದು, ಜಿಲ್ಲೆಯಲ್ಲಿ 4094 ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಅವರ ಪೈಕಿ ಪ್ರಸ್ತುತ 3845 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆ -03 ಅನ್ನು ಬರೆಯಲು ನೊಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಅನುತ್ತೀರ್ಣವಾಗುವ ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಿಲ್ಲಿಸಿ ಯಾವುದಾದರೂ ಉದ್ಯೋಗಕ್ಕೆ ಸೇರುವ ಸಾಧ್ಯತೆ ಇರುತ್ತದೆ ಎಂದರು.

ಅನುತ್ತೀರ್ಣರಾದ ವಿದ್ಯಾರ್ಥಿಗಳ ಪಟ್ಟಿ ಪಡೆದು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಗಳ ಪೋಷಕರ ಮನವೊಲಿಸಿ ಅವರನ್ನು ಪುನ: ಹತ್ತನೇ ತರಗತಿಗೆ ದಾಖಲಿಸಿಕೊಂಡು ಮುಂದಿನ ವರ್ಷ ಪರೀಕ್ಷೆ ಬರೆಸಿದರೆ ಕಂಡಿತ ಉತ್ತೀರ್ಣರಾಗುತ್ತಾರೆ ಎಂದರು.

ಸದರಿ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 50 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳನ ಮುಖ್ಯೋಪಾಧ್ಯಾಯರ ಸಭೆ ನಡೆಸಿ ಅವರಿಗೆ ಮುಂದಿನ ಸಾಲಿನಲ್ಲಿ ಫಲಿತಾಂಶ ಉತ್ತಮ‌ ಪಡಿಸಲು ಕಾರ್ಯಾಗಾರ ನಡೆಸಿ ಎಂದು ಸಲಹೆ ನೀಡಿದರು.

ಪರೀಕ್ಷೆ -03 ಕ್ಕೂ ಸಹ ಪರೀಕ್ಷೆ-02 ರಲ್ಲಿ ಅನುತ್ತೀರ್ಣರಾದ ಅಂದಾಜು 249/ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡಿರುವುದಿಲ್ಲ. ಸದರಿ ವಿದ್ಯಾರ್ಥಿಗಳ ಬಗ್ಗೆ ವಿಶೇಷ ನಿಗಾ ವಹಿಸಿ ಅವರನ್ನು ಸಹ ಶಾಲೆಗೆ ಕರೆತನ್ನಿ ಎಂದರು.

ಯಾವುದೇ ಲೋಪವಿಲ್ಲದಂತೆ ಪರೀಕ್ಷೆ ನಡೆಸಿ ಜುಲೈ 5 ರಿಂದ ಜುಲೈ 12 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ -03 12 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ನಡೆಸಲು ಎಲ್ಲಾ ಕೇಂದ್ರಗಳಿಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಅಧೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದರು.

ಪರೀಕ್ಷೆಯ ದಿನದಂದು ಪ್ರಶ್ನಪತ್ರಿಕೆಯನ್ನು ಕೊಂಡೊಯ್ಯಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಜೊತೆಗೆ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. 12 ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿಯನ್ನು ಅಳವಡಿಸಿದ್ದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೈವ್ ವೆಬ್ ಕ್ಯಾಸ್ಟಿಂಗ್ ಮೂಲಕ‌ ವೀಕ್ಷಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ಮಕ್ಕಳ ಭದ್ರತಾ ದೃಷ್ಟಿಯಿಂದ ನಿಯೋಜಿಸಲಾಗುವುದು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು, ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಸಂರಕ್ಷಿಸಿಡಲು ಸ್ಟ್ರಾಂಗ್ ರೂಮ್ ನಿರ್ಮಿಸಲಾಗಿದ್ದು 24 ಗಂಟೆಗಳ ಕಾಲ ಪೊಲೀಸ್ ಬಂದೋಬಸ್ತ್ ನೀಡಲಾಗುವುದು ಎಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೌಭಾಗ್ಯ, ಚಂದ್ರಶೇಖರ್, ಚಂದ್ರಕಾಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago