ಮಂಡ್ಯ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮಂಡ್ಯದಲ್ಲಿ 3571 ವಿದ್ಯಾರ್ಥಿಗಳು ಕನ್ನಡದಲ್ಲೇ ಅನುತ್ತೀರ್ಣ

ಮಂಡ್ಯ: ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಮಂಡ್ಯ ಎಂದು ಹೆಗ್ಗಳಿಕೆ ಪಡೆದಿದೆ. ಆದರೆ ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ದಾಖಲೆಯ ಸಂಖ್ಯೆಯಲ್ಲಿ ಅನುತ್ತೀರ್ಣರಾಗಿದ್ದಾರೆ.

2024 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿಯೇ 3571 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಅಲ್ಲದೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲಿ ಕಳೆದ ಬಾರಿ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದ್ದ ಮಂಡ್ಯ ಈ ಬಾರಿ 20ನೇ ಸ್ಥಾನಕ್ಕೆ ಕುಸಿದಿದೆ.

ಈ ಬಗ್ಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪೂರಕ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲೆಯಲ್ಲಿ ಕನ್ನಡ ಭಾಷೆಯಲ್ಲಿಯೇ 3571 ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದು ತಲೆ ತಗ್ಗಿಸುವ ವಿಷಯವಾಗಿದೆ. ಶಿಕ್ಷಕರು ಪ್ರಾಮಾಣಿಕತೆ, ಆಸಕ್ತಿ, ಪ್ರೀತಿ ಹಾಗೂ ನಿಸ್ವಾರ್ಥ ಮನೋಭಾವವನೆಯಿಂದ ಕಾರ್ಯನಿರ್ವಹಿಸಿ. ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಮುಂದೆ ತರಲು ಶ್ರಮಿಸಬೇಕು ಎಂದರು.

ಎಲ್ಲಾ ವೃತ್ತಿಗಳಲ್ಲಿ ಶಿಕ್ಷಕರ ವೃತ್ತಿ ಶ್ರೇಷ್ಠವಾಗಿದ್ದು, ಅಂತಹ ಪವಿತ್ರ ವೃತ್ತಿಯಲ್ಲಿರುವ ಶಿಕ್ಷಕರು ಹೆಚ್ಚು ಶ್ರಮಿಸಿದರೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಯಾಗುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದ ಸಾಧನೆ ಕಡಿಮೆಯಾಗಿದ್ದು, ಪ್ರತಿ ಶಿಕ್ಷಕರು ಆತ್ಮವಲೋಕನ ಮಾಡಿಕೊಂಡು ಇನ್ನು ಮುಂದೆ ಎಚ್ಚೆತ್ತುಕೊಳ್ಳಬೇಕು. ಸರಿಯಾದ ಯೋಜನೆಯನ್ನು ಹಾಕಿಕೊಂಡು ಈ ಬಾರಿ ಆಗಿರುವ ತಪ್ಪುಗಳು ಮರುಪರೀಕ್ಷೆಯಲ್ಲಿ ಮರುಕಳಿಸಬಾರದು ಎಂದು ಸೂಚಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

3 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

3 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

3 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

4 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

5 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

5 hours ago