Mysore
26
scattered clouds

Social Media

ಸೋಮವಾರ, 12 ಮೇ 2025
Light
Dark

SSLC 2024: ಉತ್ತೀರ್ಣಳಾಗಿದ್ದರೂ ವಿದ್ಯಾರ್ಥಿನಿ ನೇಣಿಗೆ ಶರಣು!

ಮದ್ದೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದರೂ ಆನ್‌ಲೈನ್‌ನಲ್ಲಿ ನೋಡಿ ಅನುತ್ತೀರ್ಣನಾಗಿದ್ದೇನೆ ಎಂಬ ತಪ್ಪು ತಿಳುವಳಿಕೆಯಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ.

ಹುಲಿಗೆರೆಪುರ ಗ್ರಾಮದ ಮಂಚೇಗೌಡ ಎಂಬವರ ಪುತ್ರಿ, ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಮೃತ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ತನ್ನ ಮೊಬೈಲ್ ಮೂಲಕ ಆನ್‌ಲೈನ್‌ನಲ್ಲಿ ಅಮೃತ ಫಲಿತಾಂಶವನ್ನು ನೋಡಿದ್ದಾಳೆ. ಶೇ. 57ರಷ್ಟು ಅಂಕ ಪಡೆದು ಉತ್ತೀರ್ಣಳಾಗಿದ್ದರೂ ತಪ್ಪು ತಿಳುವಳಿಕೆಯಿಂದ ಅನುತ್ತೀರ್ಣಳಾಗಿದ್ದೇನೆ ಎಂದು ತಿಳಿದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: