ಮಂಡ್ಯ

SSLC Results 2024: ಫೇಲಾದ ನೋವಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಮದ್ದೂರು: ಇಂದು ( ಮೇ 9 ) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಮದ್ದೂರು ತಾಲೂಕಿನ ತಗ್ಗಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ರಾಮದ ಮಹದೇವ್ ಅವರ ಮಗ ನಿಖಿಲ್ (16) ಎಂಬ ವಿದ್ಯಾರ್ಥಿ 3 ವಿಷಯಗಳಲ್ಲಿ ಅನುತ್ತೀರ್ಣನಾದ ಹಿನ್ನೆಲೆಯಲ್ಲಿ ಮನನೊಂದು ತಮ್ಮ ಹೊಲದಲ್ಲಿ 12 ಗಂಟೆ ಸಮಯಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕುಟುಂಬದ ರೋಧನ ಮುಗಿಲುಮುಟ್ಟಿದ್ದು, ಮೃತ ವಿದ್ಯಾರ್ಥಿ ಪೋಷಕರ ಎರಡನೇ ಮಗನಾಗಿದ್ದು ಈತ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬದ ದುಃಖಕ್ಕೆ ಕಾರಣವಾಗಿದೆ. ಬದುಕಿದ್ದರೆ ಎಷ್ಟು ಬಾರಿಯಾದರೂ ಪರೀಕ್ಷೆ ಬರೆದು ಪಾಸ್ ಮಾಡಿ ಬೇರೆ ಏನಾದರೂ ಮಾಡಬಹುದಿತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಅಗಲಿದ ನಿಖಿಲ್‌ನನ್ನು ನೆನೆದು ಕಣ್ಣೀರು ಹಾಕಿದ್ದಾರೆ.

 

Disclaimer: ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago