ಮಂಡ್ಯ

ನಿಂತಿದ್ದ ಟಿಪ್ಪರ್‌ಗೆ ಸ್ಕೂಟರ್ ಡಿಕ್ಕಿ

ಮದ್ದೂರು: ತಾಲ್ಲೂಕಿನ ಗಡಿಗ್ರಾಮ ನಿಡಘಟ್ಟ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ತೀವ್ರವಾಗಿ ಗಾಯಗೊಂಡ ಮತ್ತೋರ್ವ ಮದ್ದೂರು-ಮಂಡ್ಯ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಮೃತ ವ್ಯಕ್ತಿ ಹಾಗೂ ಗಾಯಾಳು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಶನಿವಾರ ಬೆಳಿಗ್ಗೆ ಫೋಟೋಶೂಟ್‌ಗೆಂದು ಮೈಸೂರಿಗೆ ತೆರಳಿ ಕೆಲಸ ಮುಗಿಸಿ ಶನಿವಾರ ಸಂಜೆ 6 ಗಂಟೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾಗುವ ವೇಳೆ ರಸ್ತೆಬದಿ ನಿಂತಿದ್ದ ಟಿಪ್ಪರ್‌ಗೆ ಹಿಂದಿನಿAದ ಡಿಕ್ಕಿಯೊಡೆದಿದ್ದಾರೆ.

ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊAಡಿದ್ದು, ಬೈಬಾದ್‌ಷಾ (21) ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಗಾಯಗೊಂಡ ವಿಜಯ್‌ವಹರಿ (23) ನಿಮ್ಹಾನ್ಸ್ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಘಟನೆ ಸಂಬAಧ ಪ್ರಕರಣ ದಾಖಲಿಸಿಕೊಂಡಿರುವ ಮದ್ದೂರು ಸಂಚಾರಿ ಪಿಎಸ್‌ಐ ಅಯ್ಯನ್‌ಗೌಡ ಘಟನೆಗೆ ಸಂಬAಧಿಸಿದ ಲಾರಿ ಚಾಲಕ ಉತ್ತರ ಪ್ರದೇಶ ಮೂಲದ ಪಪ್ಪುಸಿಂಗ್ ಅವರನ್ನು ವಶಕ್ಕೆ ಪಡೆಯಲಾಗಿದೆ.

andolana

Recent Posts

ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರ: ಈಶ್ವರ್‌ ಖಂಡ್ರೆ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

28 mins ago

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಐಸಿಸಿ…

33 mins ago

ಕಿಚ್ಚ ಸುದೀಪ್‌ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್‌ ದೂರು: ಕಾರಣ ಇಷ್ಟೇ.!

ಬೆಂಗಳೂರು: ಬಿಗ್‌ಬಾಸ್-‌12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…

43 mins ago

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದ್ದು, ಜೂನ್.‌30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…

2 hours ago

ಮೈಸೂರು| ಹುಬ್ಬಳ್ಳಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.…

2 hours ago

ಆಂದೋಲನ ವರದಿ ಫಲಶೃತಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ…

2 hours ago