ಮಂಡ್ಯ: ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸಹೊಸ ಕೋರ್ಸ್ ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು ಮಂಡ್ಯ ವಿವಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.
ಅವರು ಶುಕ್ರವಾರ ನಡೆದ ವಿ.ವಿಯ ಆಡಳಿಯ ಭವನದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಸಾಂಪ್ರದಾಯಿಕ ಶಿಕ್ಷಣಕ್ಕಷ್ಟೆ ಸೀಮಿತವಾದರೆ ವಿದ್ಯಾರ್ಥಿಗಳೂ ಆಸಕ್ತಿ ತೋರುವುದಿಲ್ಲ. ದಾಖಲಾತಿ ಕುಸಿದು ವಿವಿಗೂ ಹಿನ್ನಡೆ ಆಗಲಿದೆ. ಈಗಾಗಲೇ ಕೆಲವು ಕೋರ್ಸ್ ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಸಂಶೋಧನಾ ಚಟುವಟಿಕೆಗಳು ಕಷ್ಟ ಅನ್ನುವಂತಹ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳು ಹೊಸದನ್ನು ಕಲಿಯಬೇಕು. ಕಲಿಕೆ ಅವರ ಬದುಕನ್ನು ಕಟ್ಟಿಕೊಳ್ಳುವಂತಿರಬೇಕು. ಹೊಸ ಕೋರ್ಸ್ಗಳ ಆರಂಭ ಆಗಬೇಕು. ಹಾಗಾಗಿ, ತಜ್ಞರ ಸಮಿತಿ ರಚಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…