ಮಂಡ್ಯ

ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ : ಎನ್ ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಅವರು ಗುರುವಾರ(ಆ.15) ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಸಾಹಿತ್ಯ ಸಮ್ಮೇಳನದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಎಂದ ತಕ್ಷಣ ಎಲ್ಲರಿಗೂ ಮನಸ್ಸಿನಲ್ಲಿ ಸಂತೋಷ, ಮಂಡ್ಯ ಜಿಲ್ಲೆಯಲ್ಲಿ ಇದು ಮೂರನೇ ಬಾರಿ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರಕಿರುವುದು ಸಂತೋಷದ ವಿಷಯವಾಗಿದೆ ಎಂದರು.

ಇಂದು ಆಯೋಜಿಸಿರುವ ಸಭೆಯು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡುವ ಕಾರ್ಯಕ್ರಮವಾಗಿದೆ. ಸಮಿತಿಯಲ್ಲಿರುವ ಪ್ರತಿಯೊಬ್ಬರು ಯಾವುದೇ ಲೋಪ ಉಂಟಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ. ಶಾಸಕರು ಹಾಗೂ ಇನ್ನಿತರ ಗಣ್ಯರನ್ನು ಸಮಿತಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೇರೆ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಗಳಿಂದ ಕನ್ನಡಾಭಿಮಾನಿಗಳನ್ನು‌ ಆಗಮಿಸುವಂತೆ ಸಮ್ಮೇಳನವನ್ನು ಸಜ್ಜುಗೊಳಿಸೋಣ, ಪ್ರತಿಯೊಬ್ಬರಿಗೂ ಆಹ್ವಾನ ನಿಡೋಣ ಎಂದು ಹೇಳಿದರು.

ಎಲ್ಲಾ ಸಮಿತಿಯು ಸಮನ್ವಯದಿಂದ ಕಾರ್ಯನಿರ್ವಹಿಸೋಣ ಯಾವುದೇ ಗೊಂದಲ ಇದ್ದರೆ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಿ. ಸಮ್ಮೇಳನವನ್ನು ಆಕರ್ಷಿತವಾಗಿ ಮಾಡಲು ಈಗಿನಿಂದಲೇ ಯೋಜನೆ ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ ಮಾತನಾಡಿ, ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಚರಿಸಲು 28 ಸಮಿತಿಯನ್ನು ರಚಿಸಲಾಗಿದೆ. ಎಲ್ಲರೂ ಸಂಘಟಿತರಾಗಿ ಕೆಲಸ ನಿರ್ವಹಿಸೋಣ, ರಾಜ್ಯಕ್ಕೆ ಕರ್ನಾಟಕ ಎಂದು ಹೆಸರು ನಾಮಕರಣವಾದ ನಂತರ ಮೊದಲ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಿಲ್ಲೆಯಲ್ಲಿ ಆಚರಿಸಲಾಯಿತು. ಡಿಸೆಂಬರ್ ಮಾಹೆಯಲ್ಲಿ ಕ್ರಿಷಮಸ್ ರಜೆಯಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಕನ್ನಡ ಆಸಕ್ತರನ್ನು ಸೇರಿಸುವ ಉದ್ದೇಶದಿಂದ ಡಿಸೆಂಬರ್ 20, 21 ಹಾಗೂ 22 ರಂದು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲಾಡಳಿತ, ಸರ್ಕಾರಕ್ಕೆ ಸೀಮಿತ ಮಾಡದೇ ಪ್ರತಿಯೊಬ್ಬರು ಸೇರಿ ಕೊಂಡು ಐತಿಹಾಸಿಕ ಹಬ್ಬವಾಗಿ ಆಚರಿಸಿ. ದಾಖಲೆ ಸೃಷ್ಠಿಸುವ ರೀತಿ ಸಾಹಿತ್ಯ ಸಮ್ಮೇಳನವನ್ನು ಎಲ್ಲರ ಮನಸ್ಸಿನಲ್ಲಿ ಸವಿ ನೆನಪಾಗಿ ಉಳಿಯುವ ರೀತಿ ಮಾಡೋಣ ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನದ ಮಹಾಪೋಷಕರಾದ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ: ಶ್ರೀ ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಮಾತನಾಡಿ, ಕನ್ನಡ ನಾಡು ನುಡಿ, ಭಾಷೆಯನ್ನು ಸಂಭ್ರಮಿಸುವ ಹಬ್ಬ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ. ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಭೌತಿಕ, ಮಾನಸಿಕ ಶಕ್ತಿ ನೀಡುವ ನಮ್ಮ ಕನ್ನಡ ಭಾಷೆಯ ಹಬ್ಬವನ್ನು ಸಂಭ್ರಮಿಸೋಣ. ಪ್ರತಿಯೊಂದು ಕಲಿಕಾ ವಿಭಾಗ ಹಾಗೂ ಕ್ಷೇತ್ರದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದರು.

ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಡಿಂಡಿಮವನ್ನು ಬಾರಿಸಬೇಕು. ಇದಕ್ಕೆ ಕನ್ನಡದ ಬಗ್ಗೆ ಆಸಕ್ತಿ ಮೂಡಿಸಲು ಸತ್ತಂತಿಹರನ್ನು ಬಡಿದೆಚ್ಚರಿಸು; ಕಚ್ಚಾಡುವರನು ಕೂಡಿಸಿ ಒಲಿಸಿ ಸಮ್ಮೇಳನವನ್ನು ಉತ್ತಮವಾಗಿ ಆಚರಿಸೋಣ ಎಂದರು.

ಕಾರ್ಯಕ್ರಮದಲ್ಲಿ ವಿಧಾನಸಭಾ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಪಿ. ರವಿಕುಮಾರ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ, ಮಾಜಿ ಶಾಸಕ ಅನ್ನದಾನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ವಿವಿಧ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಂಚಾಲಕರು, ಸದಸ್ಯರು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

5 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

6 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

7 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

7 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

8 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

8 hours ago