ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಿಜೆಪಿ ವತಿಯಿಂದ ನಡೆಯುತ್ತಿರುವ ಚಡ್ಡಿ ಚಳವಳಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ರೈತರ ಪರವಾಗಿ ಹೋರಾಟ ಮಾಡುತ್ತಿದೆ. ಇಂದು ಮಂಡ್ಯ ರೈತರ ಟ್ರೇಡ್ ಮಾರ್ಕ್ ಆಗಿರೋ ಪಟಾಪಟಿ ಚಡ್ಡಿ ಧರಿಸಿ ಪ್ರತಿಭಟನೆ ಮಾಡುತ್ತಿದ್ದೇವೆ, ತಮಿಳುನಾಡಿಗೆ ಬಿಡುತ್ತಿರೋ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ನೀರನ್ನು ಬಿಡಲ್ಲ ಎಂದು ಹೇಳಿದವರು ಅಧಿಕಾರ ಹೊರಟು ಹೋಗುತ್ತೆ ಎಂದು ನೀರು ಬಿಡುತ್ತಿದ್ದಾರೆ. ತಮಿಳುನಾಡಿನವರಿಗೆ ಎರಡನೇ ಬೆಳೆಗೆ ನೀರು ಕೊಡುತ್ತಿದ್ದಾರೆ. ನಮ್ಮ ಒಂದು ಬೆಳಗೆ ನೀರಿಲ್ಲ. ತಮಿಳುನಾಡಿನವರು ಮೂರು ಬೆಳೆ ಬೆಳೆಯಬಹುದು. ನಾವು ಒಂದು ಬೆಳೆ ಬೆಳೆಯಬಾರದಾ ಎಂದು ಪ್ರಶ್ನಿಸಿದರು.
ಪೆನ್ನು ಪೇಪರ್ ಕೊಡಿ ಎಂದು ಕೇಳಿದ್ರು. ಪೆನ್ನು ಪೇಪರ್ ಕೊಟ್ಟರೆ ಇವರಿಗೆ ಏನು ಬೇಕು ಅದನ್ನು ಬರೆದುಕೊಳ್ಳುತ್ತಿದ್ದಾರೆ. ಕಾವೇರಿ ನೀರು ಕುಡಿಯಲು ಕೊಡಿ ಅಂದ್ರೆ ವಿಸ್ಕಿ, ಬ್ರಾಂದಿ ಕೊಡ್ತೀವಿ ಎನ್ನುತ್ತಾರೆ. ಜನರನ್ನು ಕುಡಿಸಿ ಕುಡಿಸಿ ಹಾಳು ಮಾಡ್ತಾರೆ. ಈ ಸರ್ಕಾರ ವಿಸ್ಕಿ, ಬ್ರಾಂದಿ, ರಮ್ ಕೊಡೋ ಸರ್ಕಾರ. ನೀರು ಕೊಡೋ ಸರ್ಕಾರ ಬಿಜೆಪಿ ಎಂದರು.
ಸೆಟೆಲ್ ಮೆಂಟ್ ಮಾಡಿದೀವಿ ಅಂತಾ ಹೇಳ್ತಾರೆ. ಏನ್ ಸೆಟೆಲ್ಮೆಂಟ್ ಮಾಡಿದ್ದಾರೆ ಇವರು. ಕೇವಲ ವಿಸ್ಕಿ, ಬ್ರಾಂದಿ, ರಮ್ ಕುಡಿಸುತ್ತಿದ್ದಾರೆ ಇವರು ಅಷ್ಟೇ. ಇವರ ಚಡ್ಡಿ ಇಳಿಸಿ, ಅಧಿಕಾರದಿಂದ ಇಳಿಸುವ ಶಕ್ತಿ ಮಂಡ್ಯಗೆ ಇದೆ. ಇದಕ್ಕೆ ಇಂದಿನ ಚಡ್ಡಿ ಮೆರವಣಿಗೆಯೇ ಸಾಕ್ಷಿ ಎಂದು ಹೇಳಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…