ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಿಜೆಪಿ ವತಿಯಿಂದ ನಡೆಯುತ್ತಿರುವ ಚಡ್ಡಿ ಚಳವಳಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ರೈತರ ಪರವಾಗಿ ಹೋರಾಟ ಮಾಡುತ್ತಿದೆ. ಇಂದು ಮಂಡ್ಯ ರೈತರ ಟ್ರೇಡ್ ಮಾರ್ಕ್ ಆಗಿರೋ ಪಟಾಪಟಿ ಚಡ್ಡಿ ಧರಿಸಿ ಪ್ರತಿಭಟನೆ ಮಾಡುತ್ತಿದ್ದೇವೆ, ತಮಿಳುನಾಡಿಗೆ ಬಿಡುತ್ತಿರೋ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ನೀರನ್ನು ಬಿಡಲ್ಲ ಎಂದು ಹೇಳಿದವರು ಅಧಿಕಾರ ಹೊರಟು ಹೋಗುತ್ತೆ ಎಂದು ನೀರು ಬಿಡುತ್ತಿದ್ದಾರೆ. ತಮಿಳುನಾಡಿನವರಿಗೆ ಎರಡನೇ ಬೆಳೆಗೆ ನೀರು ಕೊಡುತ್ತಿದ್ದಾರೆ. ನಮ್ಮ ಒಂದು ಬೆಳಗೆ ನೀರಿಲ್ಲ. ತಮಿಳುನಾಡಿನವರು ಮೂರು ಬೆಳೆ ಬೆಳೆಯಬಹುದು. ನಾವು ಒಂದು ಬೆಳೆ ಬೆಳೆಯಬಾರದಾ ಎಂದು ಪ್ರಶ್ನಿಸಿದರು.
ಪೆನ್ನು ಪೇಪರ್ ಕೊಡಿ ಎಂದು ಕೇಳಿದ್ರು. ಪೆನ್ನು ಪೇಪರ್ ಕೊಟ್ಟರೆ ಇವರಿಗೆ ಏನು ಬೇಕು ಅದನ್ನು ಬರೆದುಕೊಳ್ಳುತ್ತಿದ್ದಾರೆ. ಕಾವೇರಿ ನೀರು ಕುಡಿಯಲು ಕೊಡಿ ಅಂದ್ರೆ ವಿಸ್ಕಿ, ಬ್ರಾಂದಿ ಕೊಡ್ತೀವಿ ಎನ್ನುತ್ತಾರೆ. ಜನರನ್ನು ಕುಡಿಸಿ ಕುಡಿಸಿ ಹಾಳು ಮಾಡ್ತಾರೆ. ಈ ಸರ್ಕಾರ ವಿಸ್ಕಿ, ಬ್ರಾಂದಿ, ರಮ್ ಕೊಡೋ ಸರ್ಕಾರ. ನೀರು ಕೊಡೋ ಸರ್ಕಾರ ಬಿಜೆಪಿ ಎಂದರು.
ಸೆಟೆಲ್ ಮೆಂಟ್ ಮಾಡಿದೀವಿ ಅಂತಾ ಹೇಳ್ತಾರೆ. ಏನ್ ಸೆಟೆಲ್ಮೆಂಟ್ ಮಾಡಿದ್ದಾರೆ ಇವರು. ಕೇವಲ ವಿಸ್ಕಿ, ಬ್ರಾಂದಿ, ರಮ್ ಕುಡಿಸುತ್ತಿದ್ದಾರೆ ಇವರು ಅಷ್ಟೇ. ಇವರ ಚಡ್ಡಿ ಇಳಿಸಿ, ಅಧಿಕಾರದಿಂದ ಇಳಿಸುವ ಶಕ್ತಿ ಮಂಡ್ಯಗೆ ಇದೆ. ಇದಕ್ಕೆ ಇಂದಿನ ಚಡ್ಡಿ ಮೆರವಣಿಗೆಯೇ ಸಾಕ್ಷಿ ಎಂದು ಹೇಳಿದರು.
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…